ಕರ್ನಾಟಕ

karnataka

ETV Bharat / state

ಕೋರ್ಟ್​ಗೆ ಹಾಜರಾಗದ ಸಾಹಿತಿ ಭಗವಾನ್.. ಬಂಧನಕ್ಕೆ ವಾರೆಂಟ್ ಜಾರಿ ಮಾಡಿದ ಸಾಗರ ಕೋರ್ಟ್ - Sagara JMFC Court

ಸಾಗರದ JMFC ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ್ ಭಗಾಡೆ ಅವರು ಭಗವಾನ್ ಅವರ ಬಂಧನಕ್ಕೆ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸಾಗರ ಕೋರ್ಟ್
ಸಾಗರ ಕೋರ್ಟ್

By

Published : Nov 2, 2022, 4:53 PM IST

ಶಿವಮೊಗ್ಗ: ಕೋರ್ಟ್​ಗೆ ಹಾಜರಾಗದ ಸಾಹಿತಿ ಭಗವಾನ್ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಮಾಡಿ ಸಾಗರ ಕೋರ್ಟ್ ಆದೇಶ ಮಾಡಿದೆ. ಸಾಹಿತಿ ಭಗವಾನ್ ಅವರು 'ರಾಮ ಮಂದಿರ ಏಕೆ ಬೇಡ?' ಕೃತಿ ರಚಿಸಿದ್ದರು. ಈ ಕೃತಿಯು ವಿವಾದತ್ಮಾಕವಾಗಿದೆ. ಬಹು ಸಂಖ್ಯಾತರ ಭಾವನೆಗೆ ಧಕ್ಕೆ ತರುತ್ತದೆ‌ ಎಂದು ಸಾಗರ ತಾಲೂಕು ಇಕ್ಕೇರಿ ಗ್ರಾಮದ ಮಹಾಬಲೇಶ್ವರ್ ಎಂಬುವರು ಸಾಗರದ JMFC ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ಪ್ರಕರಣದ ಕುರಿತು ದೀರ್ಘಕಾಲದ ವಿಚಾರಣೆ ನಡೆಸಿದ ನ್ಯಾಯಾಲಯ ಭಗವಾನ್ ವಿರುದ್ಧ IPC ಸೆಕ್ಷನ್ 295(a) ಅಡಿಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿತ್ತು. ಪ್ರಕರಣದ ವಿಚಾರಣೆಗೆ ಇಂದು ಭಗವಾನ್ ಖುದ್ದು‌ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು‌ ಮೈಸೂರು ಎಸ್​ಪಿ ಅವರ ಮೂಲಕ ಸಮನ್ಸ್ ಜಾರಿ‌ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದರೂ ಸಹ ಇಂದು ಸಾಹಿತಿ ಭಗವಾನ್ ಅವರು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಕೋರ್ಟ್

ಇದರಿಂದ ಸಾಗರದ JMFC ನ್ಯಾಯಾಧೀಶರಾದ ಶ್ರೀಶೈಲ ಭೀಮಸೇನ್ ಭಗಾಡೆ ಅವರು ಭಗವಾನ್ ಅವರ ಬಂಧನಕ್ಕೆ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಇದರಿಂದ ಸಾಗರ ಟೌನ್​ ಪೊಲೀಸರಿಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಬೇಕೆಂದು ಆದೇಶ ನೀಡಿದೆ. ದೂರುದಾರ ಮಹಾಬಲೇಶ್ವರ ಅವರ ಪರವಾಗಿ ವಕೀಲ ಕೆ ವಿ ಪ್ರವೀಣ್ ಅವರು ವಾದ ಮಂಡಿಸಿದ್ದಾರೆ.

ಓದಿ:ಸಾಹಿತಿ ಭಗವಾನ್ ವಿಚಾರದಲ್ಲಿ ಸಾಗರದ ಕೋರ್ಟ್ ಮೈಸೂರು ಎಸ್​ಪಿಗೆ ನೋಟಿಸ್

ABOUT THE AUTHOR

...view details