ಕರ್ನಾಟಕ

karnataka

ಹರತಾಳು ಹಾಲಪ್ಪ ಕುಟುಂಬಕ್ಕೆ ವಕ್ಕರಿಸಿದ ಕೊರೊನಾ: ಕಾರು ಚಾಲಕ, ಮನೆಗೆಲಸದವರಿಗೂ ಸೋಂಕು ದೃಢ!

ಸಾಗರ ತಾಲೂಕಿನ ಶಾಸಕ ಹರತಾಳು ಹಾಲಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

By

Published : Aug 4, 2020, 3:26 PM IST

Published : Aug 4, 2020, 3:26 PM IST

ಸಾಗರ ಶಾಸಕ ಹರತಾಳು ಹಾಲಪ್ಪ
ಸಾಗರ ಶಾಸಕ ಹರತಾಳು ಹಾಲಪ್ಪ

ಶಿವಮೊಗ್ಗ: ಸಾಗರದ ಶಾಸಕ, ಮಾಜಿ ಸಚಿವ ಹರತಾಳು ಹಾಲಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿದ್ದ ಶಾಸಕರು ಮೈಕೈ ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಟೆಸ್ಟ್​ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಅವರ ಪತ್ನಿ, ಕಾರು ಚಾಲಕ‌ ಹಾಗೂ ಮನೆಗೆಲಸದವರಿಗೆ ಕೊರೊನಾ ಟೆಸ್ಟ್​ ಮಾಡಲಾಗಿದ್ದು, ಅವರಿಗೂ ಮಹಾಮಾರಿ ಕೊರೊನಾ ವಕ್ಕರಿಸಿದೆ.

ಸದ್ಯ ಶಾಸಕ‌ ಹಾಲಪ್ಪ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಸಂಪರ್ಕ ಹೊಂದಿದ್ದವರು ಕ್ವಾರಂಟೈನ್​ಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ABOUT THE AUTHOR

...view details