ಶಿವಮೊಗ್ಗ:ಪಿಂಚಣಿದಾರರಿಗೆ ನೀಡಬೇಕಾಗಿರುವ ಹಣವನ್ನು ಕೂಡಲೇ ನೀಡುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ: ಪಿಂಚಣಿ ಹಣ ಬಿಡುಗಡೆಗೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ - shimogga protest
ಸರ್ಕಾರ ಕೂಡಲೇ ಈ ಸಮಸ್ಯೆಗೆ ಸ್ಪಂದಿಸಿ ಕಳೆದ ಏಳು ತಿಂಗಳಿಂದ ಬಾಕಿ ಇರುವ ಪಿಂಚಣಿ ಹಣ ನೀಡುವ ಜೊತೆಯಲ್ಲಿ ನೂತನವಾಗಿ ಪಿಂಚಣಿ ಆದೇಶ ಪತ್ರ ಪಡೆದಿರುವ ಪಲಾನುಭವಿಗಳಿಗೂ ಪಿಂಚಣಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
![ಶಿವಮೊಗ್ಗ: ಪಿಂಚಣಿ ಹಣ ಬಿಡುಗಡೆಗೆ ಆಗ್ರಹಿಸಿ ಎಸ್ಡಿಪಿಐ ಪ್ರತಿಭಟನೆ protest](https://etvbharatimages.akamaized.net/etvbharat/prod-images/768-512-8710085-900-8710085-1599468365675.jpg)
protest
ಎಸ್ಡಿಪಿಐ ಪ್ರತಿಭಟನೆ
ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷಾ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತ್ತಿರುವ ಪಿಂಚಣಿದಾರರಿಗೆ ಕಳೆದ ಏಳು ತಿಂಗಳಿಂದ ಪಿಂಚಣಿ ಹಣ ಸರ್ಕಾರದಿಂದ ಸಂದಾಯವಾಗಿಲ್ಲದ ಕಾರಣ ಪಿಂಚಣಿಯನ್ನೆ ನಂಬಿಕೊಂಡು ಬದುಕುತ್ತಿದ್ದವರ ಜೀವನ ಅಸ್ತವ್ಯಸ್ತವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಹಾಗಾಗಿ ಸರ್ಕಾರ ಕೂಡಲೇ ಈ ಸಮಸ್ಯೆಗೆ ಸ್ಪಂದಿಸಿ ಕಳೆದ ಏಳು ತಿಂಗಳಿಂದ ಬಾಕಿ ಇರುವ ಪಿಂಚಣಿ ಹಣ ನೀಡುವ ಜೊತೆಯಲ್ಲಿ ನೂತನವಾಗಿ ಪಿಂಚಣಿ ಆದೇಶ ಪತ್ರ ಪಡೆದಿರುವ ಪಲಾನುಭವಿಗಳಿಗೂ ಪಿಂಚಣಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.
Last Updated : Sep 7, 2020, 8:25 PM IST