ಶಿವಮೊಗ್ಗ:ಇಂದು ಕರೆಯಲಾಗಿದ್ದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ನ ಹಲವು ಸದಸ್ಯರು ಗೈರಾದ ಹಿನ್ನೆಲೆ, ಸಭೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಲಾಗಿದೆ.
ಸದಸ್ಯರ ಗೈರು: ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಮುಂದೂಡಿಕೆ
ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಗೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ನ ಹಲವು ಸದಸ್ಯರು ಗೈರಾದ ಹಿನ್ನೆಲೆ, ಸಭೆಯ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಸಭೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಿದ್ದಾರೆ.
ಸಂಸದರು, ಶಾಸಕರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು ಸೇರಿ ಸಾಮಾನ್ಯ ಸಭೆಯಲ್ಲಿ ಒಟ್ಟು 51 ಮಂದಿ ಭಾಗವಹಿಸಬೇಕು. ಆದರೆ, ಇಂದು ಕೇವಲ 15 ಸದಸ್ಯರಷ್ಟೇ ಭಾಗವಹಿಸಿದ್ದರಿಂದ ಸಭೆಯ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಸಭೆಯನ್ನು ಅಕ್ಟೋಬರ್ 16ಕ್ಕೆ ಮುಂದೂಡಿದ್ದಾರೆ.
ಜಿಲ್ಲಾ ಪಂಚಾಯತ್ನಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಪಕ್ಷ ಆಡಳಿತದಲ್ಲಿದ್ದರೂ ಸಹ ಬಿಜೆಪಿ ಪಕ್ಷದ ಸದಸ್ಯರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸದಸ್ಯರಲ್ಲಿ ಭಿನ್ನಮತಕ್ಕೆ ಕಾರಣವಾಗಿದೆ. ಇದರಿಂದಾಗಿಯೇ ಹಲವು ಸದಸ್ಯರು ಗೈರಾಗಿದ್ದಾರೆ ಎನ್ನಲಾಗಿದೆ.