ಕರ್ನಾಟಕ

karnataka

ETV Bharat / state

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ - ಎಬಿವಿಪಿ ಪ್ರತಿಭಟನೆ ಸುದ್ದಿ

ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದವರಿಗೆ ಶಿಕ್ಷೆಯಾಗಬೇಕು ಜೊತೆಗೆ ಈ ಸಂಬಂಧ ಪ್ರಬಲವಾದ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ

By

Published : Sep 21, 2020, 6:40 PM IST

Updated : Sep 21, 2020, 7:26 PM IST

ಶಿವಮೊಗ್ಗ:ಪ್ರಬಲವಾದ ಕಾನೂನು ರೂಪಿಸಿ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿದವರನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ಪ್ರತಿಭಟನೆ

ಕೆಲ ದಿನಗಳಿಂದ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಸಂಬಂಧ ನಟ, ನಟಿಯರನ್ನು ತನಿಖೆ ನಡೆಸಲಾಗುತ್ತಿದೆ. ಹಾಗಾಗಿ ಡ್ರಗ್ಸ್ ಮಾಫಿಯಾ ಎನ್ನುವುದು ಯುವ ಸಮೂಹವನ್ನು ದಾರಿ ತಪ್ಪಿಸುತ್ತಿದೆ. ಯುವಕ, ಯುವತಿಯರು ಮಾದಕ ವ್ಯಸನಿಗಳಾಗುತ್ತಿದ್ದಾರೆ.

ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳ ಮುಖ್ಯಸ್ಥರಿಗೆ ತಮ್ಮ ಕಾಲೇಜು ಕ್ಯಾಂಪಸ್​​ಗಳನ್ನು ಮಾದಕ ವಸ್ತುಗಳ ಮುಕ್ತ ಕ್ಯಾಂಪಸ್ ಎಂದು ಘೋಷಿಸಿಕೊಳ್ಳಬೇಕು. ಶಿಕ್ಷಣ ಕ್ಷೇತ್ರವನ್ನು ಮಾದಕ ವಸ್ತುಗಳಿಂದ ರಕ್ಷಿಸಲು ಮಾದಕ ವಸ್ತು ನಿಗ್ರಹದಳವನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿ, ಪ್ರತಿಭಟನೆ ನಡೆಸಿದರು.

Last Updated : Sep 21, 2020, 7:26 PM IST

ABOUT THE AUTHOR

...view details