ಶಿವಮೊಗ್ಗ:ಖಾಸಗಿ ಬಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡ್ರೈವರ್ ಹಾಗೂ ಕಂಡಕ್ಟರ್ಗಳಿಗೂ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ನಗರ ಸಾರಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಬಿ.ಸಿ.ಶಿವರಾಜ್ ಆಗ್ರಹಿಸಿದ್ದಾರೆ.
ಖಾಸಗಿ ಬಸ್ ಡ್ರೈವರ್ ಹಾಗೂ ಕಂಡಕ್ಟರ್ಗಳಿಗೂ ವಿಶೇಷ ಪ್ಯಾಕೇಜ್ ಘೋಷಿಸಲು ಆಗ್ರಹ - latest private news in shivamogga
ಕೊರೊನಾ ವೈರಸ್ ಹಿನ್ನೆಲೆ ದೇಶವೇ ಲಾಕ್ಡೌನ್ ಆಗಿದೆ. ಅದರಂತೆ ನಗರ ಸಾರಿಗೆ ಬಸ್ಗಳ ಸಂಚಾರವನ್ನು ಸಹ ನಿಲ್ಲಿಸಲಾಗಿದೆ. ಹಾಗಾಗಿ ಖಾಸಗಿ ಬಸ್ಗಳಲ್ಲಿ ಕೆಲಸ ಮಾಡುತ್ತಿರುವ ಡ್ರೈವರ್ ಹಾಗೂ ಕಂಡಕ್ಟರ್ಗಳಿಗೂ ಕೂಡ ಸರ್ಕಾರ ಸಹಾಯ ಮಾಡಲು ಆಗ್ರಹಿಸಲಾಗಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆ ದೇಶವೇ ಲಾಕ್ಡೌನ್ ಆಗಿದೆ. ಅದರಂತೆ ನಗರ ಸಾರಿಗೆ ಬಸ್ಗಳ ಸಂಚಾರವನ್ನು ಸಹ ನಿಲ್ಲಿಸಲಾಗಿದೆ. ಹಾಗಾಗಿ ಖಾಸಗಿ ಬಸ್ಗಳಲ್ಲಿ ಕೆಲಸ ಮಾಡುತ್ತಿರುವ ಡ್ರೈವರ್ ಹಾಗೂ ಕಂಡಕ್ಟರ್ಗಳಿಗೂ ಕೂಡ ಸರ್ಕಾರ ಸಹಾಯ ಮಾಡಬೇಕು ಎಂದು ಕೇಳಿಕೊಂಡರು.
ಗ್ರೀನ್ ಝೋನ್ಗಳಲ್ಲಿ ಅಂಗಡಿ, ಮುಂಗಟ್ಟುಗಳಿಗೆ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಆದರೆ ಬಸ್ ಸಂಚಾರಕ್ಕೆ ಸಡಿಲಿಕೆ ಮಾಡಿಲ್ಲ. ಇದರಿಂದ ಎರಡು ತಿಂಗಳಿನಿಂದ ಸಂಬಳ ಇಲ್ಲದೆ, ಮನೆಗಳ ಬಾಡಿಗೆ ಕಟ್ಟಲಾಗದೆ ಹೊತ್ತಿನ ಊಟ ಸಹ ಇಲ್ಲದೆ ಬದುಕು ಸಾಗಿಸುತ್ತಿದ್ದೇವೆ. ಸರ್ಕಾರ ಈ ಬಗ್ಗೆ ಗಮನ ಹರಿಸಿ ನಮಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.