ಶಿವಮೊಗ್ಗ: ಯುಗಾದಿ ಹಿನ್ನೆಲೆ, ಮಾರುಕಟ್ಟೆಯಲ್ಲಿ ಪ್ರತಿ ಬಾರಿ ಇರುತ್ತಿದ್ದ ಜನಜಂಗುಳಿ ಈ ವರ್ಷ ಕಂಡುಬರುತ್ತಿಲ್ಲ. ಕೊರೊನಾ ಹಿನ್ನೆಲೆ ಸರಳವಾಗಿ ಯುಗಾದಿ ಹಬ್ಬವನ್ನು ಆಚರಿಸಲು ಜಿಲ್ಲೆಯ ಜನ ನಿರ್ಧರಿಸಿದಂತೆ ಕಾಣುತ್ತಿದೆ.
ಪ್ರತಿ ವರ್ಷ ಯುಗಾದಿ ಹಬ್ಬ ಬಂತೆಂದರೆ ಸಾಕು, ಶಿವಮೊಗ್ಗದಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿ ಭರಾಟೆ ಎಗ್ಗಿಲ್ಲದಂತೆ ನಡೆಯುತ್ತಿತ್ತು. ಆದರೆ ಕಳೆದ ವರ್ಷದಿಂದ ಯುಗಾದಿ ಹಬ್ಬದ ಸಂಭ್ರಮವನ್ನು ಕೊರೊನಾ ಕಸಿದುಕೊಂಡಿದೆ. ಆದರೆ ಈ ಬಾರಿ ಲಾಕ್ಡೌನ್ ಇಲ್ಲ. ಆದರೂ ಶಿವಮೊಗ್ಗದಲ್ಲಿ ಯುಗಾದಿ ರಂಗು ಅಷ್ಟಾಗಿ ಕಾಣುತ್ತಿಲ್ಲ.