ಕರ್ನಾಟಕ

karnataka

By

Published : Nov 5, 2020, 11:01 AM IST

ETV Bharat / state

ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನ: ಶಿವಮೊಗ್ಗದಲ್ಲಿ ಮೂವರ ಬಂಧನ

ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಶಿವಮೊಗ್ಗ ತಾಲೂಕು ಚಿಕ್ಕಕೊಡಲಿ ಗ್ರಾಮದಲ್ಲಿ ಬಂಧಿಸಲಾಗಿದೆ. ಬಂಧಿತರಿಂದ ಎರಡು ಮಣ್ಣು ಮುಕ್ಕ ಹಾವುಗಳನ್ನ ವಶಕ್ಕೆ ಪಡೆಯಲಾಗಿದೆ.

3 arrested in Shimoga
ಮಣ್ಣು ಮುಕ್ಕ ಹಾವು ಮಾರಾಟ ಯತ್ನ: ಶಿವಮೊಗ್ಗದಲ್ಲಿ ಮೂವರ ಬಂಧನ

ಶಿವಮೊಗ್ಗ: ಅಕ್ರಮವಾಗಿ ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಅರಣ್ಯ ಸಂಚಾರಿ ದಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಿಂಗಾಪುರದ ನವೀನ, ಸಕಲೇಶಪುರದ ಕೇಶವ ಹಾಗೂ ಹೊನ್ನಾಳಿಯ ಶ್ರೀನಿವಾಸ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಶಿವಮೊಗ್ಗ ತಾಲೂಕು ಚಿಕ್ಕಕೊಡಲಿ ಗ್ರಾಮದಲ್ಲಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಎರಡು ಮಣ್ಣು ಮುಕ್ಕ ಹಾವನ್ನು ವಶಕ್ಕೆ ಪಡೆದಿದ್ದಾರೆ.

ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ರಂಗನಾಥ್, ಗಣೇಶ್, ರತ್ನಾಕರ್, ಗಿರೀಶ್, ವಿಶ್ವನಾಥ್ ಹಾಗೂ ಮಂಜುನಾಥ್ ದಾಳಿಯಲ್ಲಿದ್ದರು.

ABOUT THE AUTHOR

...view details