ಕರ್ನಾಟಕ

karnataka

ETV Bharat / state

ಎರಡು ದಿನದ ಹಿಂದೆ ಜನ್ಮದಿನ ಆಚರಣೆ.. ತಾಯಿ ಸಾವನ್ನಪ್ಪಿ ವರ್ಷದೊಳಗೇ ಮಗ ಆತ್ಮಹತ್ಯೆ - ನೇಣು ಬಿಗಿದುಕೊಂಡು ಆತ್ಮಹತ್ಯೆ

ತಾಯಿ ಅಗಲಿಕೆಯಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಎರಡು ದಿನಗಳ ಹಿಂದೆಯಷ್ಟೇ ಜನ್ಮ ದಿನ ಆಚರಿಸಿಕೊಂಡಿದ್ದ ಎನ್ನಲಾಗಿದೆ.

suicide
ಆತ್ಮಹತ್ಯೆ

By

Published : Sep 4, 2022, 7:17 PM IST

ಶಿವಮೊಗ್ಗ: ಮನೆಯಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರದ ಎಸ್.ಎನ್ ನಗರದ ಹೊಸಬಡಾವಣೆಯಲ್ಲಿ ನಡೆದಿದೆ. ನಾಗರಾಜ್ (23) ಆತ್ಮಹತ್ಯೆಗೆ ಶರಣಾಗಿರುವ ಯುವಕ.

ಗ್ಯಾಸ್ ಬಂಕ್​​ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜ್ ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ಜನ್ಮದಿನ ಆಚರಿಸಿಕೊಂಡಿದ್ದ. ಹಾಗೆಯೇ ನಾಗರಾಜನ ತಾಯಿ ಮೃತಪಟ್ಟು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್, ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗ್ತಿದೆ.

ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪ್ರೊಬೆಷನರಿ ಡಿವೈಎಸ್ಪಿ ಅಶ್ವಿನಿ ಗೋವರ್ಧನ್, ಎಎಸ್ಐ ಹಾಲಪ್ಪ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

(ಓದಿ: ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾನೂ ಸಾವಿಗೆ ಶರಣಾದ ರೈತ ಸಂಘದ ಅಧ್ಯಕ್ಷನ ಪತ್ನಿ)

ABOUT THE AUTHOR

...view details