ಶಿವಮೊಗ್ಗ:ವರದಾನದಿಯ ಪ್ರವಾಹದಿಂದಾಗಿ ಸೊರಬ ತಾಲೂಕಿನ ಲಕ್ಕವಳ್ಳಿಯಲ್ಲಿರುವ ಶ್ರೀಮೋಕ್ಷ ಮಂದಿರ ಸಂಸ್ಥಾನ ಜೈನಮಠಕ್ಕೆ ಸಾಕಷ್ಟು ಹಾನಿಯಾಗಿದೆ. ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕೆಂದು ವೃಷಭ ಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಪ್ರವಾಹದ ಎಫೆಕ್ಟ್: ಲಕ್ಕವಳ್ಳಿಯ ಜೈನ ಮಠದ ಜೀರ್ಣೋದ್ಧಾರಕ್ಕೆ ಸ್ವಾಮೀಜಿ ಮನವಿ - ಶ್ರೀಮೋಕ್ಷ ಮಂದಿರ ಸಂಸ್ಥಾನ ಜೈನಮಠ
ವರದಾ ನದಿಯ ಪ್ರವಾಹದಿಂದಾಗಿ ಸೊರಬ ತಾಲೂಕಿನ ಲಕ್ಕವಳ್ಳಿಯಲ್ಲಿರುವ ಶ್ರೀಮೋಕ್ಷ ಮಂದಿರ ಸಂಸ್ಥಾನ ಜೈನಮಠಕ್ಕೆ ಸಾಕಷ್ಟು ಹಾನಿಯಾಗಿದೆ. ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ವೃಷಭ ಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಆಗ್ರಹಿಸಿದ್ದಾರೆ.
![ಶಿವಮೊಗ್ಗದಲ್ಲಿ ಪ್ರವಾಹದ ಎಫೆಕ್ಟ್: ಲಕ್ಕವಳ್ಳಿಯ ಜೈನ ಮಠದ ಜೀರ್ಣೋದ್ಧಾರಕ್ಕೆ ಸ್ವಾಮೀಜಿ ಮನವಿ](https://etvbharatimages.akamaized.net/etvbharat/prod-images/768-512-4199536-thumbnail-3x2-sanju.jpg)
ವೃಷಭ ಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಮಾತನಾಡಿದ್ದಾರೆ
ಈಟಿವಿ ಭಾರತ ಜೊತೆ ವೃಷಭ ಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಮಾತು
ಈ ಕುರಿತು ಈಟಿವಿ ಬಾರತನೊಂದಿಗೆ ಮಾತನಾಡಿದ ಅವರು, ಲಕ್ಕವಳ್ಳಿಯಲ್ಲಿರುವ ಜೈನಮಠಕ್ಕೆ ಪ್ರವಾಹದಿಂದ ಸಂಪೂರ್ಣ ಹಾನಿಯಾಗಿದ್ದು, ಮಠ , ಅಲ್ಲಿನ ದೇವಸ್ಥಾನ, ಪ್ರೌಢಶಾಲಾ ವಸತಿ ನಿಲಯ ಕಟ್ಟಡಗಳಿಗೆ ನೀರು ನುಗ್ಗಿದೆ. ಅಲ್ಲದೇ ಸುಮಾರು 20 ಕಟ್ಟಡಗಳಿಗೂ ಹಾನಿಯಾಗಿದೆ. ಇದರಿಂದಾಗಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಸರ್ಕಾರ ತಕ್ಷಣವೇ ಮಠದ ಜೀರ್ಣೋದ್ಧಾರ ಮಾಡಿ ಮತ್ತು ವರದಾ ನದಿ ತಡೆಗೋಡೆ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.