ಕರ್ನಾಟಕ

karnataka

ETV Bharat / state

ಎಂಪಿಎಂ ಕಾರ್ಖಾನೆ ಪುನಾರಂಭಕ್ಕೆ ಹೋರಾಟ,ಆನ್‌ಲೈನಲ್ಲಿ ಅಭಿಯಾನ - undefined

ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನಾರಂಭ ಸಂಬಂಧ ನಡೆಯುತ್ತಿರುವ ಹೋರಾಟ ಈಗ ಆನ್’ಲೈನ್ ರೂಪ ಪಡೆದುಕೊಂಡಿದೆ.

ಎಂಪಿಎಂ ಕಾರ್ಖಾನೆ

By

Published : May 21, 2019, 11:17 PM IST

ಶಿವಮೊಗ್ಗ:ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆ ಪುನರಾರಂಭ ಮಾಡುವಂತೆ ನಿರಂತರ ಹೋರಾಟಗಳು ನಡೆಯುತ್ತಿದ್ವು. ಈಗ ಈ ಹೋರಾಟ ಆನ್‌ಲೈನ್‌ ರೂಪ ಪಡೆದುಕೊಂಡಿದ್ದು, ಎಂಪಿಎಂ ಪುನರಾರಂಭವಾಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಲಾಗಿದೆ.

ಕಾರ್ಖಾನೆ ಮತ್ತೆ ಆರಂಭಿಸುವಂತೆ, ಭದ್ರಾವತಿಯ ಯುವಕರು ಟ್ವಿಟರ್​​ನಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಟ್ಯಾಗ್ ಮಾಡಿ, ತಮ್ಮ ಮನವಿ ಸಲ್ಲಿಸುತ್ತಿದ್ದಾರೆ. ಎಂಪಿಎಂ ಕಾರ್ಖಾನೆ ಮುಚ್ಚಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬ ಸಂಕಷ್ಟದಲ್ಲಿದೆ. ಹಾಗಾಗಿ ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

#ReopenMysorePaperMills ಮತ್ತು #MPM_Bhadravathi ಹ್ಯಾಷ್ ಟ್ಯಾಗ್ ಮೂಲಕ ಟ್ವೀಟ್​​​ಗಳನ್ನು ಮಾಡಲಾಗುತ್ತಿದೆ.ಎಂಪಿಎಂ ಪುನಾರಂಭ ಮಾಡುವಂತೆ ಈವರೆಗೂ ಸಾವಿರ ಟ್ವೀಟ್​​​ಗಳು ಬಂದಿವೆ.

For All Latest Updates

TAGGED:

ABOUT THE AUTHOR

...view details