ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಿದ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದೇವೆ. ಈಗ ಅವರ ಫೋಟೋ ಹರಿಯುವ ಧೈರ್ಯವನ್ನು ಯಾರೂ ಮಾಡಲ್ಲ ಎಂದು ಕೆ.ಎಸ್.ಈಶ್ವರಪ್ಪ ಗುಡುಗಿದರು.
ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ನಡೆದ ಸಾವರ್ಕರ್ ಸಾಮ್ರಾಜ್ಯ ಎಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾವರ್ಕರ್ ಒಬ್ಬ ಅಪ್ರತಿಮ ದೇಶ ಭಕ್ತ. ಅಂತಹವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ನಮ್ಮ ತಂಟೆಗೆ ಬರುವವರನ್ನು ಸುಮ್ಮನೆ ಬಿಡಲ್ಲ ಎಂಬ ಸಂದೇಶ ಈ ವೇದಿಕೆಯಿಂದ ಹೋಗಲಿ ಎಂದರು.
ಸಾವರ್ಕರ್ ಅಂದು ಮಾಡಿದ ಬಲಿದಾನ ಇಂದು ಸಮಾಜವನ್ನು ಜಾಗೃತಿಗೊಳಿಸಿದೆ. ಅಂದು ಸಾವರ್ಕರ್ರವರಿಗೆ ಹಿಂಸೆ ನೀಡಲಾಗುತ್ತಿತ್ತು. ಅವರಿಗಾಗಿ ಮಿಡಿಯುವ ಹೃದಯಗಳು ಕೈ ಹಿಸುಕಿಕೊಳ್ಳುವಂತಾಗಿತ್ತು. ಈಗ ಅದೇ ಕೈಗಳು ಜೈಕಾರ ಹಾಕುತ್ತಿವೆ ಎಂದು ಹೇಳಿದರು.