ಶಿವಮೊಗ್ಗ:ಋಣಮುಕ್ತ ಕಾಯ್ದೆಯಡಿ ಮೈಕ್ರೋ ಪೈನಾನ್ಸ್ಗಳ ಸಾಲ ಮನ್ನಾ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ತಿ.ನಾ. ಶ್ರೀನಿವಾಸ್ ಆಗ್ರಹಿಸಿದರು.
ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಹಾವಳಿ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಸುಮಾರು 172ಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ಗಳಿವೆ. ಇವುಗಳನ್ನು ಸ್ಥಾಪಿಸಿರುವವರು ಒಂದು ರೀತಿಯಲ್ಲಿ ಬಡ್ಡಿ ವ್ಯವಹಾರ ಮಾಡುವ ಶ್ರೀಮಂತರಾಗಿದ್ದಾರೆ ಎಂದರು.