ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳಿಗೆ ನೀಡಬೇಕಾದ ಬೆಡ್​ಶೀಟ್​ ಬಚ್ಚಿಟ್ಟ ಹಾಸ್ಟೆಲ್‌ ವಾರ್ಡನ್.. ಜನಪ್ರತಿನಿಧಿಗಳ ಮುಂದೆ ಎಲ್ಲ ಬಯಲು.. - ವಾರ್ಡನ್​ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ

52ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರತಿದಿನ ಟೀ ಮಾಡಲು ಕೇವಲ 1 ಲೀಟರ್ ಹಾಲನ್ನು ತರಿಸುತ್ತಿದ್ದಾರೆ. ಕೇವಲ 1 ಕೆಜಿ ಚಿಕನ್ ತರಿಸಿ ಉಣಬಡಿಸುತ್ತಿದ್ದಾರೆ. ಸಸ್ಯಹಾರಿ ವಿದ್ಯಾರ್ಥಿಗಳಿಗೆ ಅದು ಕೂಡ ಇಲ್ಲ. ನಮ್ಮ ಹಾಸ್ಟೆಲ್‌ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಸಿಗಬೇಕಾದ ಸವಲತ್ತು ಸಿಗುತ್ತಿಲ್ಲ ಎಂದು ದೂರಿದರು..

Warden hidden student bed sheets allegation in Sagar hostel
ಆದಂದಪುರದ ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿಗಳಿಗೆ ನೀಡಬೇಕಾದ ಬೆಡ್​ಶೀಟ್​ ಬಚ್ಚಿಟ್ಟ ವಾರ್ಡನ್​​​

By

Published : Feb 19, 2022, 4:17 PM IST

Updated : Feb 19, 2022, 5:34 PM IST

ಶಿವಮೊಗ್ಗ:ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಗ್ರಾಮದ ಸಿದ್ದೇಶ್ವರ ಹಾಸ್ಟೆಲ್​ನಲ್ಲಿ ಮೇಲ್ವಿಚಾರಕಿ ವಿದ್ಯಾರ್ಥಿನಿಯರಿಗೆ ಬೆಡ್​ಶೀಟ್​ಗಳನ್ನು ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಆನಂದಪುರ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮಮತಾ ಎಂಬುವರು ಕಳೆದ ವರ್ಷ ಸರ್ಕಾರ ವಿದ್ಯಾರ್ಥಿಗಳಿಗೆ ವಿತರಿಸಲು ಬೆಡ್​​​​ಶೀಟ್​​​ಗಳನ್ನು ನೀಡಿತ್ತು.

ಆದರೆ, ವಿದ್ಯಾರ್ಥಿ ನಿಯಲದ ಮೇಲ್ವಿಚಾರಕಿ ದುರುದ್ದೇಶದಿಂದ 30ಕ್ಕೂ ಅಧಿಕ ಬೆಡ್​​​ಶೀಟ್​​​​​ಗಳನ್ನು ಮುಚ್ಚಿಟ್ಟಿದ್ದಾರೆ. ಈ ಕುರಿತು ಹಾಸ್ಟೆಲ್ ವಿದ್ಯಾರ್ಥಿನಿಯರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಕುಮಾರಿ ಹಾಗೂ ಸಾಗರ ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆಯವರ ಬಳಿ ದೂರು ‌ನೀಡಿದ್ದರು.

ಆದಂದಪುರದ ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿಗಳಿಗೆ ನೀಡಬೇಕಾದ ಬೆಡ್​ಶೀಟ್​ ಬಚ್ಚಿಟ್ಟ ವಾರ್ಡನ್​​​

ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಸ್ಟೆಲ್​​​​ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಮೇಲ್ವಿಚಾರಕಿ ಮೇಲೆ ಆರೋಪಗಳ ಸುರಿಮಳೆ ಸುರಿದರು. ಚಳಿಗಾಲದಲ್ಲಿ ಬೆಡ್​​​​​​ಶೀಟ್ ನೀಡುವಂತೆ ಬೇಡಿಕೊಂಡರೂ ಸಹ ನೀಡಲಿಲ್ಲ.

52ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರತಿದಿನ ಟೀ ಮಾಡಲು ಕೇವಲ 1 ಲೀಟರ್ ಹಾಲನ್ನು ತರಿಸುತ್ತಿದ್ದಾರೆ. ಕೇವಲ 1 ಕೆಜಿ ಚಿಕನ್ ತರಿಸಿ ಉಣಬಡಿಸುತ್ತಿದ್ದಾರೆ. ಸಸ್ಯಹಾರಿ ವಿದ್ಯಾರ್ಥಿಗಳಿಗೆ ಅದು ಕೂಡ ಇಲ್ಲ. ನಮ್ಮ ಹಾಸ್ಟೆಲ್‌ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ವಿದ್ಯಾರ್ಥಿಗಳಿಗೆ ಸಿಗಬೇಕಾದ ಸವಲತ್ತು ಸಿಗುತ್ತಿಲ್ಲ ಎಂದು ದೂರಿದರು.

ಈ ಬಗ್ಗೆ ಹಾಸ್ಟೆಲ್ ಮೇಲ್ವಿಚಾರಕಿಯನ್ನು ವಿಚಾರಿಸಿದಾಗ ಅವರು ಹಾರಿಕೆಯ ಉತ್ತರ ನೀಡಿದ್ದಾರೆ‌. ಬಳಿಕ ಮಲ್ಲಿಕಾರ್ಜುನ್ ಹಕ್ರೆ ಸಮ್ಮುಖದಲ್ಲಿ ಮುಚ್ಚಿಟ್ಟಿದ್ದ ಬೆಡ್​​​​ಶೀಟ್​​​​​ಗಳನ್ನು ಹಂಚಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಮಾತ್ರ ಒಕ್ಕೊರಲಿನಿಂದ ವಾರ್ಡನ್ ಬದಲಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಸಚಿವ ಕೆ.ಎಸ್.ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

Last Updated : Feb 19, 2022, 5:34 PM IST

ABOUT THE AUTHOR

...view details