ಕರ್ನಾಟಕ

karnataka

By

Published : Sep 20, 2020, 1:18 PM IST

ETV Bharat / state

ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳ: 50 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ

ಮಧ್ಯ ಕರ್ನಾಟದ ಭಾಗದ ಜನರ ಜೀವನಾಡಿ ಭದ್ರಾ ಜಲಾಶಯದಿಂದ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

dswd
ಭದ್ರಾ ಜಲಾಶಯದಿಂದ ನದಿಗೆ ನೀರು ಹೊರಕ್ಕೆ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭದ್ರಾ ಅಣೆಕಟ್ಟೆಗೆ ಒಳ ಹರಿವು ಹೆಚ್ಚಾಗಿದೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ 50 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

ಕಳೆದ 24 ಗಂಟೆಯಲ್ಲಿ ಅಣೆಕಟ್ಟೆಗೆ ಏಕಾಏಕಿ ಒಳ ಹರಿವು ಹೆಚ್ಚಳವಾಗಿದೆ. ಮೊದಲು ಬೆಳಗಿನಜಾವ 5 ಸಾವಿರ‌ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಯಿತು.‌

ನಂತರ 7 ಸಾವಿರ ಕ್ಯೂಸೆಕ್ ನೀರು‌ ಬಿಡಲಾಯಿತು. ಹೀಗೆ ಹಂತ ಹಂತವಾಗಿ ಒಟ್ಟು 50 ಸಾವಿರ ಕ್ಯೂಸೆಕ್ ಹರಿಬಿಡಲಾಗಿದೆ.

ABOUT THE AUTHOR

...view details