ಬೆಂಗಳೂರು: ಕೊರೊನಾ ಸೋಂಕಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶೀಘ್ರ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥಿಸಿ, ನಿನ್ನೆ ರಾತ್ರಿ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಡಿಕೆಶಿ ಅಭಿಮಾನಿಗಳು ಈಡುಗಾಯಿ ಸೇವೆ ನೆರವೇರಿಸಿದ್ದರು.
ಇಂದು ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದವರು ಬೆಂಗಳೂರಿನ ವಯ್ಯಾಲಿಕಾವಲ್ ಟಿಟಿಡಿ ಶ್ರೀ ವೆಂಕಟೇಶ್ವರ ದೇಗುಲದಲ್ಲಿ 1001 ತೆಂಗಿನಕಾಯಿಗಳನ್ನು ಒಡೆದು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.