ಮಂಡ್ಯ: ಕಬ್ಬು ಕಡಿಯುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ಆಟೋವೊಂದು ಪಲ್ಟಿಯಾಗಿ ಎಂಟು ಮಂದಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದ ಬಳಿ ನಡೆದಿದೆ.
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ: 8 ಮಂದಿಗೆ ಗಾಯ - ಗೂಡ್ಸ್ ಆಟೋ ಪಲ್ಟಿ
ಮಹದೇವಪುರದಿಂದ ಆರಕೆರೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಆಟೋ ಹಳ್ಳಕ್ಕೆ ಉರುಳಿ ಬಿದ್ದಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
![ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ: 8 ಮಂದಿಗೆ ಗಾಯ Accident](https://etvbharatimages.akamaized.net/etvbharat/prod-images/768-512-09:11:45:1602819705-kn-mnd-01-accident-av-7202530-16102020090820-1610f-1602819500-371.jpg)
Accident
ಗಾಯಗೊಂಡ ಕಾರ್ಮಿಕರು ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಗ್ರಾಮದವರಾಗಿದ್ದು, ಎಲ್ಲರಿಗೂ ಮಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹದೇವಪುರದಿಂದ ಆರಕೆರೆಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಹಳ್ಳಕ್ಕೆ ಉರುಳಿ ಬಿದ್ದಿದ್ದೆ.
ಈ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.