ತುಮಕೂರು:ಕಾಯಿ ಕೀಳಲು ತೆಂಗಿನ ಮರವೇರಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ತಿಪಟೂರು ನಗರದ ಕೆರೆ ಏರಿ ಬಳಿ ನಡೆದಿದೆ.
ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು - ತೆಂಗಿನ ಮರದಿಂದ ಅಯತಪ್ಪಿ ಬಿದ್ದು ವ್ಯಕ್ತಿ ಸಾವು,
ತೆಂಗಿನ ಕಾಯಿ ಕೀಳಲು ಮರವೇರಿದ್ದ ವ್ಯಕ್ತಿ ಆಯತಪ್ಪಿ ಕೆಳಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತೆಂಗಿನ ಮರದಿಂದ ಅಯತಪ್ಪಿ ಬಿದ್ದು ವ್ಯಕ್ತಿ ಸಾವು
ತೆಂಗಿನ ಮರದಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಮೃತ ವ್ಯಕ್ತಿಯನ್ನು ಮಡೇನೂರು ಬೋವಿ ಕಾಲೋನಿಯ ಯಲ್ಲಪ್ಪ (45) ಎಂದು ಗುರುತಿಸಲಾಗಿದೆ. ತೆಂಗಿನ ತೋಟವು ಗಣೇಶ ಎಂಬುವವರಿಗೆ ಸೇರಿದ್ದಾಗಿದ್ದು, ಅನೇಕ ದಿನಗಳಿಂದ ಮೃತ ಯಲ್ಲಪ್ಪ ತೋಟದಲ್ಲಿ ಕೆಲಸ ಮಾಡುತ್ತಿದ್ದನು.
ಗಣೇಶ್, ಯಲ್ಲಪ್ಪ ನನ್ನು ಕರೆದುಕೊಂಡು ಬಂದು ಕಾಯಿ ಕೀಳಿಸಲು ಮರ ಹತ್ತಿಸಿದ್ದನು. ಯಲ್ಲಪ್ಪ ಆಯತಪ್ಪಿ ಕೆಳಗಡೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.