ತುಮಕೂರು: ಕ್ಯಾಂಟರ್ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮೇಲೆ ಉರುಳಿ ಬಿದ್ದು ಆತ ಮೃತಪಟ್ಟಿರುವ ಘಟನೆ ತಾಲೂಕಿನ ತಿಮ್ಮರಾಜನಹಳ್ಳಿ ಗ್ರಾಮದ ಬಳಿ ನಡೆದಿದೆ.
ಶಿರಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಎರಡು ವಾಹನಗಳು ಅಪಘಾತಕ್ಕೆ ಒಳಗಾಗಿವೆ. ಕ್ಯಾಂಟರ್ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿರುವ ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಸಂಪೂರ್ಣ ಮಗುಚಿ ಬಿದ್ದಿದೆ. ಪರಿಣಾಮ ಎರಡೂ ವಾಹನದಲ್ಲಿದ್ದ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.