ತುಮಕೂರು/ನೆಲಮಂಗಲ :ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿ ನಡೆದಿದೆ.
ನೆಲಮಂಗಲದ ಬಳಿ ಮರಕ್ಕೆ ಕಾರು ಡಿಕ್ಕಿ : ತುಮಕೂರಿನ ಇಬ್ಬರು ಸಾವು, ಓರ್ವನಿಗೆ ಗಾಯ
ನೆಲಮಂಗಲದ ಕಡೆಗೆ ಹೋಗುತ್ತಿದ್ದಂತೆ ಚಾಲಕನ ನಿಯಂಯತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ನೆಲಮಂಗಲದಲ್ಲಿ ಕಾರು ಅಪಘಾತ
ಮೃತರನ್ನು ತುಮಕೂರು ನಗರದ ಪವನ್ ಆರಾಧ್ಯ (24)ಮತ್ತು ಉದಯ್ (27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಣಿ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಮೂವರು ತುಮಕೂರಿನಿಂದ ಬೆಂಗಳೂರಿನ ಕಡೆಗೆ ಸಂಚರಿಸುತ್ತಿದ್ದರು. ನೆಲಮಂಗಲದ ಕಡೆಗೆ ಹೋಗುತ್ತಿದ್ದಂತೆ ಚಾಲಕನ ನಿಯಂಯತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jul 3, 2021, 5:01 PM IST