ಕರ್ನಾಟಕ

karnataka

By

Published : Apr 10, 2021, 2:02 PM IST

ETV Bharat / state

ಪ್ರತಿಭಟನಾ ಱಲಿಯಲ್ಲಿ ಕೋವಿಡ್​ ನಿಯಮ ಉಲ್ಲಂಘನೆ.. ಎರಡೂ ಕಡೆಯವರ ವಿರುದ್ಧ ಪ್ರಕರಣ ದಾಖಲು

ಏ.08 ರಂದು ತುರುವೇಕೆರೆ ತಾಲೂಕಿನ ಸಿಎಸ್​ಪುರ ಗ್ರಾಮದಲ್ಲಿ ಶಾಸಕ ಮಸಾಲೆ ಜಯರಾಮ್ ಮತ್ತು ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ-ಪ್ರತ್ಯಾರೋಪದೊಂದಿಗೆ ನಡೆಸಿದ್ದ ಪ್ರತಿಭಟನಾ ಱಲಿಯಲ್ಲಿ ಕೋವಿಡ್​ ನಿಯಮಗಳು ಉಲ್ಲಂಘನೆ ಆಗಿವೆ. ಈ ಸಂಬಂಧ ಎರಡೂ ಕಡೆಯವರ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್
District Collector Y.S. Patil

ತುಮಕೂರು: ಏ.08 ರಂದು ತುರುವೇಕೆರೆ ತಾಲೂಕಿನ ಸಿ ಎಸ್ ​ಪುರ ಗ್ರಾಮದಲ್ಲಿ ಶಾಸಕ ಮಸಾಲೆ ಜಯರಾಮ್ ಮತ್ತು ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಆರೋಪ-ಪ್ರತ್ಯಾರೋಪದೊಂದಿಗೆ ನಡೆಸಿದ್ದ ಪ್ರತಿಭಟನಾ ಱಲಿಯಲ್ಲಿ ಕೋವಿಡ್​ ನಿಯಮಗಳು ಉಲ್ಲಂಘನೆ ಮಾಡಿದ್ದಾರೆ ಎಂದು ಎರಡೂ ಕಡೆಯವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮಗಳು ಎಲ್ಲರಿಗೂ ಒಂದೇ. ಅದನ್ನು ಯಾರೇ ಉಲ್ಲಂಘನೆ ಮಾಡಿದರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಘಟನೆ ಸಂಬಂಧ ಈಗಾಗಲೇ ಪೊಲೀಸರಿಗೆ ಎರಡು ಕಡೆಯವರ ವಿರುದ್ಧ ಪ್ರಕರಣ ದಾಖಲಿಸುವಂತೆ ತಿಳಿಸಲಾಗಿದೆ ಎಂದರು.

ಘಟನೆ ಹಿನ್ನೆಲೆ:

ತುರುವೇಕೆರೆ ಶಾಸಕ ಮಸಾಲೆ ಜಯರಾಮ್​ ಅವರ ಮಗ ತೇಜು ಎಂಬುವವರ ಮೇಲೆ ಹಲ್ಲೆ ನಡೆದಿತ್ತು. ಇದಕ್ಕೆ ಜೆಡಿಎಸ್ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಕಾರಣ ಎಂದು ಮಸಾಲೆ ಜಯರಾಮ್ ಆರೋಪಿಸಿದ್ದರು.

ಸಿ.ಎಸ್. ಪುರ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿ ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಏ. 8ರಂದು ಎರಡೂ ಪಕ್ಷದ ಮುಖಂಡರು ಸಿಎಸ್ ಪುರ ಪೊಲೀಸ್ ಠಾಣೆ ಎದುರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿದ್ದರು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details