ಕರ್ನಾಟಕ

karnataka

By

Published : Oct 7, 2021, 3:25 PM IST

ETV Bharat / state

ಪೊಲೀಸರ ಸೋಗಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಸರಗಳ್ಳತನ ಆರೋಪಿ ಅರೆಸ್ಟ್​

ಪೊಲೀಸ್​ ಎಂದು ಹೇಳಿಕೊಂಡು ನಿರ್ಜನ ಪ್ರದೇಶಕ್ಕೆ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ನಡೆಸಿ ಮಾಂಗಲ್ಯಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಅಮೃತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

chain snatcher  arrested by Police at tumkur
ಸರಗಳ್ಳತನ ಆರೋಪಿ ಬಂಧಿಸಿದ ಅಮೃತೂರು ಪೊಲೀಸರು​

ತುಮಕೂರು: ಪೊಲೀಸರ ಸೋಗಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಅಮೃತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದೇವಲಾಪುರ ಹೋಬಳಿಯ ದೊಡ್ಡ ಚಿಕ್ಕನಹಳ್ಳಿ ಗ್ರಾಮದ ಪ್ರದೀಪ ಬಂಧಿತ ಆರೋಪಿ. ಈತ ತಾನು ಪೊಲೀಸ್​ ಎಂದು ಹೇಳಿಕೊಂಡು ನಿರ್ಜನ ಪ್ರದೇಶಕ್ಕೆ ಮಹಿಳೆ ಕರೆದೊಯ್ದು ಅತ್ಯಾಚಾರ ನಡೆಸಿ ಮಾಂಗಲ್ಯಸರ ಕಿತ್ತುಕೊಂಡು ಪರಾರಿಯಾಗಿದ್ದನು.

ಸರಗಳ್ಳತನ ಆರೋಪಿ ಬಂಧಿಸಿದ ಅಮೃತೂರು ಪೊಲೀಸರು​

ಆರೋಪಿ ಆಗಸ್ಟ್ 1ರಂದು ಚಿಕ್ಕಲ್ಯಾ ಗ್ರಾಮದ ಮಹಿಳೆಯೊಬ್ಬರನ್ನು ತಾನು ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು, ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನಿಮ್ಮನ್ನು ಠಾಣೆಗೆ ಕರೆತರಲು ಸಬ್ಇನ್ಸ್​ಪೆಕ್ಟರ್ ಹೇಳಿದ್ದಾರೆ ಎಂದು ಭಯ ಹುಟ್ಟಿಸಿ, ಬಲವಂತದಿಂದ ಬೈಕ್​ನಲ್ಲಿ ಮಹಿಳೆಯನ್ನು ಯಡಿಯೂರು ಬಳಿಯ ಶ್ರೀನಿವಾಸದೇವರ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದನು.

ನಂತರ ಆಕೆಗೆ ಚಾಕು ತೋರಿಸಿ ಹೆದರಿಸಿದ್ದಾನೆ. ಸ್ಥಳದಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಮಾಂಗಲ್ಯ ಸರ, ಮೊಬೈಲ್, ಎಟಿಎಂ ಕಾರ್ಡ್ ಪರ್ಸ್​ ಕಿತ್ತುಕೊಂಡು ಪರಾರಿಯಾಗಿದ್ದನು.

ಈ ಸಂಬಂಧ ಮಹಿಳೆ ಅಮೃತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇದೀಗ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಪ್ರದೀಪ್​ ಬೆಂಗಳೂರು, ಮೈಸೂರು, ಹಾಸನ ಸೇರಿದಂತೆ ನಾನಾ ಕಡೆಗಳಲ್ಲಿ 17 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ABOUT THE AUTHOR

...view details