ತುಮಕೂರು :ಅನೇಕ ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಜಿಲ್ಲೆಯ ಶಿರಾ ತಾಲೂಕು ದಾಸರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜನರನ್ನು ಆತಂಕದಲ್ಲಿರಿಸಿದ್ದ ಚಿರತೆ ಕೊನೆಗೂ ಬಿತ್ತು ಬೋನಿಗೆ..
ಶಿರಾ ತಾಲೂಕು ದಾಸರಹಳ್ಳಿ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಜಮೀನಿನಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಸುಮಾರು 3-4 ವಷ೯ದ ಚಿರತೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸ್ಥಳಾಂತರಿಸಿದ್ದಾರೆ.