ಕರ್ನಾಟಕ

karnataka

By

Published : Apr 23, 2023, 10:52 PM IST

ETV Bharat / state

ತುಮಕೂರು ಜಿಲ್ಲೆಯಲ್ಲಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ..

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.

chief-minister-basavaraj-bommai-road-show-in-tumkur-district
ತುಮಕೂರು ಜಿಲ್ಲೆಯಲ್ಲಿ ಸಿಎಂ ಬೊಮ್ಮಾಯಿ ಭರ್ಜರಿ ರೋಡ್ ಶೋ..

ತುಮಕೂರು:ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾವು ಜೋರಾಗಿದ್ದು, ಎಲ್ಲ ಪಕ್ಷಗಳ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಮತಬೇಟೆ ಆರಂಭಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸಿದ್ದಾರೆ. ಅಂತೆಯೇ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಪತರು ನಾಡಿನಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡರು. ಮುಂದಿನ ದಿನಗಳಲ್ಲಿ ಕುಂಚಿಟಿಗ ಸಮುದಾಯವನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಪ್ರಯತ್ನ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಪ್ರಚಾರದ ವೇಳೆ ಭರವಸೆ ನೀಡಿದರು. ಜಿಲ್ಲೆಯಾದ್ಯಂತ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ರೋಡ್​​ ಶೋ ನಡೆಸಿ ಮತಬೇಟೆ ವೇಳೆ ಅವರು ಮಾತನಾಡಿದರು.

ಗುಬ್ಬಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿಲೀಪ್​ ಪರ ರೋಡ್ ಶೋ ನಡೆಸಿದ ಸಿಎಂ ಅವರು, "ಎಸ್​​ಸಿ, ಎಸ್​ಟಿ ಮೀಸಲಾತಿಯನ್ನು ಹೆಚ್ಚಿಸಿ ಎಲ್ಲಾರಿಗೂ ನ್ಯಾಯ ಕೊಡುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ.‌ ಬಹಳ‌ ವರ್ಷಗಳ ಬೇಡಿಕೆ ಈಡೇರಿಸುವ ಕೆಲಸ‌ವನ್ನು ಮಾಡಿದೆ. ನಮ್ಮ ಸರ್ಕಾರದಲ್ಲಿ ಕಾಯಕಯೋಗಿ ಯೋಜನೆ ಜಾರಿಗೆ ತಂದಿದ್ದೇವೆ. ಡಬಲ್​ ಇಂಜಿನ್ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

ಗುಬ್ಬಿಯಲ್ಲಿ 25 ಸಾವಿರ ಜನರಿಗೆ ಕಿಸಾನ್ ಸಮ್ಮಾನ್ ಯೋಜನೆ ಸಿಕ್ಕಿದೆ.‌ ಆಯುಷ್ಮಾನ್ ಯೋಜನೆ, ರೈತ ವಿದ್ಯಾಸಿರಿ ಯೋಜನೆ ಮಾಡಿದ್ದೇವೆ. ಗುಬ್ಬಿಯಲ್ಲಿ ಕಮಲ ಅರಳಿದೆ. ಬಿಜೆಪಿ ಅಭ್ಯರ್ಥಿ ದಿಲೀಪ್ ಅವರು ಕ್ರಿಯಾಶೀಲ ವ್ಯಕ್ತಿ. ಅವರನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಬೇಕು ಎಂದು ಜನರಲ್ಲಿ ಸಿಎಂ ಬೊಮ್ಮಾಯಿ ಮನವಿ ಮಾಡಿದರು.

ಬಿ ಸಿ ನಾಗೇಶ್​​ ಪರ ಮತಯಾಚಿಸಿದ ಸಿಎಂ: ತಿಪಟೂರು ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ಪರ ಪ್ರಚಾರ ನಡೆಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಬಿ ಸಿ ನಾಗೇಶ್ ಸರಳ ಸಜ್ಜನ ರಾಜಕಾರಣಿ. 5 ವರ್ಷದ ಹಿಂದೆ ತಿಪಟೂರು ಹೇಗಿತ್ತು, ಈಗ ಹೇಗಿದೆ ಎಂಬುದರ ಬಗ್ಗೆ ಒಂದು ಸಲ ಯೋಚನೆ ಮಾಡಿ. ಇವತ್ತು ತಿಪಟೂರು ಕ್ಷೇತ್ರದಲ್ಲಿ ಅಭಿವೃದ್ಧಿಯಾಗಿದೆ ಅಂದರೆ ಅದಕ್ಕೆ ಬಿ ಸಿ ನಾಗೇಶ್ ಕಾರಣ. ಈ ಚುನಾವಣೆಯಲ್ಲಿ 25 ಸಾವಿರ ಅಂತರದ ಮತದಿಂದ ಅವರು ಗೆಲ್ಲುವ ವಿಶ್ವಾಸವಿದೆ ಎಂದರು.

ನಮ್ಮ ನಾಯಕ ಯಡಿಯೂರಪ್ಪ ಅವರು ರೈತರಿಗೆ ಉಚಿತ ವಿದ್ಯುತ್​ ಅನ್ನು ನೀಡಿದರು. ಭಾಗ್ಯಲಕ್ಷ್ಮೀ‌ ಯೋಜನೆಯಿಂದ ಶೇ.30ರಷ್ಟು ಅಲ್ಪಸಂಖ್ಯಾತ ಹೆಣ್ಣು ಮಕ್ಕಳಿಗೆ ಅನುಕೂಲವಾಗಿದೆ‌. ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ತಿಪಟೂರು ಕ್ಷೇತ್ರದ 20 ಸಾವಿರ ಜನರು ಉಪಯೋಗ ಪಡೆದುಕೊಂಡಿದ್ದಾರೆ. ರೈತರ ವಿದ್ಯಾನಿಧಿ ಯೋಜನೆ,‌ ಸ್ತ್ರೀ ಸಾಮರ್ಥ್ಯ ಯೋಜನೆ. ಎಸ್​​ಸಿ‌ ಎಸ್​ಟಿ ಯವರಿಗೆ 75 ಯೂನಿಟ್ ಉಚಿತ ವಿದ್ಯುತ್. 8 ಸಾವಿರಕ್ಕೂ ಹೆಚ್ಚು ಶಾಲಾ ಕೊಠಡಿ ನಿರ್ಮಾಣ. ಇದರ ಕ್ರೆಡಿಟ್ ಬಿ ಸಿ ನಾಗೇಶ್ ಅವರಿಗೆ ಸಲ್ಲಬೇಕು ಎಂದು ಹೇಳಿದರು.

ಇದನ್ನೂ ಓದಿ:ಸೋಮವಾರ ಅಮಿತ್ ಶಾ, ಜೆ ಪಿ‌ ನಡ್ಡಾ ರಾಜ್ಯಕ್ಕೆ ಎಂಟ್ರಿ: ವಿವಿಧೆಡೆ ಪ್ರತ್ಯೇಕ ರೋಡ್ ಶೋ ನಡೆಸಿ ಮತಬೇಟೆ

ABOUT THE AUTHOR

...view details