ಕರ್ನಾಟಕ

karnataka

By

Published : Sep 28, 2020, 11:59 AM IST

Updated : Sep 28, 2020, 12:27 PM IST

ETV Bharat / state

ಬೈಕ್​ ಱಲಿ ನಡೆಸಲು ಮುಂದಾದ ಕಾರ್ಯಕರ್ತರ ತಡೆದ ತುಮಕೂರು ಪೊಲೀಸರು

ತುಮಕೂರಿನಲ್ಲಿ ಕರ್ನಾಟಕ ಬಂದ್​ ಬೆಂಬಲಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಬೈಕ್ ಱಲಿ ನಡೆಸಲು ಕಾರ್ಯಕರ್ತರು ಮುಂದಾಗಿದ್ದು, ಅವರನ್ನು ಪೊಲೀಸರು ತಡೆದಿದ್ದಾರೆ.

ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ತುಮಕೂರು:ಜಿಲ್ಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಬೈಕ್ ಱಲಿ ನಡೆಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರೈತ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ನಗರದ ಟೌನ್​ ಹಾಲ್​ ವೃತ್ತದಲ್ಲಿ ಜಮಾಯಿಸಿದ್ದ ರೈತ ಸಂಘ ಸದಸ್ಯರು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು.

ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಸುಮಾರು ಹತ್ತು ಗಂಟೆ ವೇಳೆಗೆ ಬೈಕ್​ ಱಲಿ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Last Updated : Sep 28, 2020, 12:27 PM IST

ABOUT THE AUTHOR

...view details