ಕರ್ನಾಟಕ

karnataka

ETV Bharat / state

ಕೋವಿಡ್-19 ಆತಂಕ: ತುಮಕೂರು ಜಿಲ್ಲೆಯ ಜನರಿಗೆ ಸಿಹಿ ಸುದ್ದಿ ನೀಡಿದ್ರು ಆರೋಗ್ಯಾಧಿಕಾರಿ - ಹೋಂ ಕ್ವಾರೆಂಟೈನ್​​ನಲ್ಲಿ 64 ಮಂದಿ

ಕೊರೊನಾ ಭೀತಿಯಲ್ಲಿದ್ದ ತುಮಕೂರು ಜಿಲ್ಲೆಯ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಈವರೆಗೂ 473 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 326 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿರುವುದರಿಂದ ಇಲ್ಲಿನ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

covid-19 report
ಕೋವಿಡ್​​-19

By

Published : Apr 16, 2020, 9:10 AM IST

ತುಮಕೂರು: ಕೋವಿಡ್​​-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ 480 ಮಂದಿಯ ಮೇಲೆ ತೀವ್ರ ನಿಗಾವಹಿಸಲಾಗಿದೆ. ಈ ಪೈಕಿ 64 ಮಂದಿಯನ್ನು ಹೋಂ ಕ್ವಾರೆಂಟೈನ್​​ನಲ್ಲಿ ಇರಿಸಲಾಗಿದೆ. ಅವರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಸೂಚಿಸಲಾಗಿದೆ.

ಒಟ್ಟು 258 ಮಂದಿಯನ್ನು ಐಸೋಲೇಷನ್​​ನಲ್ಲಿ ಇಡಲಾಗಿದ್ದು, 306 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆಗೂ 473 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 326 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿವೆ.

ಕೋವಿಡ್​​-19 ರಿಪೋರ್ಟ್​

ಈವರೆಗೆ 2 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. 4 ಮಾದರಿಗಳು ತಿರಸ್ಕೃತಗೊಂಡಿವೆ ಹಾಗೂ 141 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಂದ್ರಿಕಾ ತಿಳಿಸಿದ್ದಾರೆ.

ABOUT THE AUTHOR

...view details