ಕರ್ನಾಟಕ

karnataka

ETV Bharat / state

ಚರ್ಚೆಗೆ ಗ್ರಾಸವಾದ ಜಿಲ್ಲಾಧಿಕಾರಿಯೊಂದಿಗಿನ ಸಿ.ಟಿ ರವಿ ಸಭೆ - ಜಿಲ್ಲಾಧಿಕಾರಿ ಜೊತೆ ಸಿಟಿಮ ರವಿ ಸಭೆ

ತುಮಕೂರು ಡಿಸಿ ಜೊತೆ ಸಿ.ಟಿ ರವಿ ಸಭೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ. ಜನಪ್ರತಿನಿಧಿ ಅಲ್ಲದ, ಅದರಲ್ಲೂ ಬೇರೆ ಜಿಲ್ಲೆಯವರಾದ ಸಿ.ಟಿ ರವಿ, ತುಮಕೂರಿಗೆ ಬಂದು ಸರ್ಕಾರಿ ಅಧಿಕಾರಿಯೊಂದಿಗೆ ಸಭೆ ನಡೆಸಲು ಅವರು ಯಾರು ಎಂದು ಕಾಂಗ್ರೆಸ್, ಜೆಡಿಎಸ್​ ನಾಯಕರು ಪ್ರಶ್ನಿಸಿದ್ದಾರೆ.

CT Ravi meeting with DC which caused the controversy
ವಿವಾದಕ್ಕೆ ಕಾರಣವಾದ ಸಿಟಿ ರವಿ ಡಿಸಿ ಸಭೆ

By

Published : May 4, 2021, 7:24 AM IST

ತುಮಕೂರು:ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಅವರೊಂದಿಗೆ ಕೋವಿಡ್ ಪರಿಸ್ಥಿತಿ ಕುರಿತು ಸಭೆ ನಡೆಸಿರುವುದು ಚರ್ಚೆ ಕಾರಣವಾಗಿದೆ.

ಸಿ.ಟಿ ರವಿ ಅವರು ಸರ್ಕಾರದ ಪ್ರತಿನಿಧಿಯೂ ಅಲ್ಲ, ಸಚಿವರೂ ಅಲ್ಲ. ಬದಲಾಗಿ ಪಕ್ಷವೊಂದರ ಉನ್ನತ ಮಟ್ಟದ ನಾಯಕರು ಮಾತ್ರ. ಹಾಗಿರುವಾಗ ಅವರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಕುರಿತು ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಪ್ರತಿಕ್ರಿಯಿಸಿದ್ದು, ತುಮಕೂರು ಜಿಲ್ಲೆಗೂ ಸಿ.ಟಿ ರವಿ ಏನು ಸಂಬಂಧವಿದೆ. ಅವರು ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸುವ ಅಗತ್ಯವೇನಿದೆ? ಮೊದಲಿಗೆ ಚಿಕ್ಕಮಗಳೂರು ಜಿಲ್ಲೆಯ ಮೇಲೆ ಕಾಳಜಿ ವಹಿಸಲಿ. ಅಲ್ಲಿ ಕೋವಿಡ್ ರೋಗಿಗಳಿಗೆ ಎಷ್ಟರ ಮಟ್ಟಿಗೆ ಸೌಲಭ್ಯ ಕಲ್ಪಿಸಲಾಗಿದೆ, ಎಷ್ಟು ಆಸ್ಪತ್ರೆಗಳನ್ನು ಮೀಸಲಿಡಲಾಗಿದೆ ಎಂಬುವುದರ ಬಗ್ಗೆ ಮಾಹಿತಿ ಪಡೆಯಲಿ. ಅದನ್ನು ಬಿಟ್ಟು ಪಕ್ಷದ ನಾಯಕನೆಂಬ ನೆಲೆಯಲ್ಲಿ ದರ್ಪ ತೋರಿಸುವುದು ಸರಿಯಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂಓದಿ : 'ರಿಸೈನ್ ಸುಧಾಕರ್' ಕಾಂಗ್ರೆಸ್ ಅಭಿಯಾನ: 11 ಲಕ್ಷ ಮಂದಿ ಬೆಂಬಲ

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ, ಕೋವಿಡ್ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿರುವುದನ್ನು ಗಮನಿಸಿದರೆ, ಒಂದು ರೀತಿ ಪಕ್ಷ ಮತ್ತು ಸರ್ಕಾರದ ನಡುವೆ ನಂಬಿಕೆ ಇಲ್ಲದಂತಾಗಿದೆ ಎಂಬುವುದು ಗೊತ್ತಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪಕ್ಷದ ನಡುವೆ ಹೊಂದಾಣಿಕೆ ಇಲ್ಲ ಎಂಬುವುದನ್ನು ಇದು ಪ್ರತಿಬಿಂಬಿಸುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರನ್ನು ಬಿಜೆಪಿ ಪಕ್ಷ ಮತ್ತು ಸರ್ಕಾರ ಗಣನೆಗೆ ತೆಗದುಕೊಂಡಿಲ್ಲ ಎಂಬಂತಾಗುತ್ತದೆ ಎಂದು ಟೀಕಿಸಿದ್ದಾರೆ.

ಇನ್ನು ಸಿ.ಟಿ ರವಿ ಅವರೊಂದಿಗೆ ನಡೆದ ಮಾತುಕತೆಯ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಅವರು ಓರ್ವ ಜನಪ್ರತಿನಿಧಿಯಾಗಿ ಬಂದು ಮಾಹಿತಿ ಕೇಳಿದ್ದಾರೆ. ಅದನ್ನು ಕೊಡುವುದು ನನ್ನ ಕರ್ತವ್ಯವಾಗಿದೆ. ಕಚೇರಿಗೆ ಬಂದು ಮಾಹಿತಿ ಕೇಳಿದ್ದರು, ಆ ವೇಳೆ ಯಾವ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿರಲಿಲ್ಲ ಎಂದು ಹೇಳಿದ್ದಾರೆ.

ABOUT THE AUTHOR

...view details