ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ಗ್ರಾಮದಲ್ಲಿರುವ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠದಲ್ಲಿ ನಡೆದ ಶತಚಂಡಿಕಾ ಮಹಾಯಾಗದಲ್ಲಿ ಮಾಜಿ ಸಚಿವ ಡಿ ಕೆ ಶಿವಕುಮಾರ್ ಪಾಲ್ಗೊಂಡರು.
ಶತ ಚಂಡಿಕಾ ಯಾಗದಲ್ಲಿ ಡಿ ಕೆ ಶಿವಕುಮಾರ್ ಭಾಗಿ!
ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಂಡಿಕಾಯಾಗ ಆಯೋಜನೆ ಮಾಡಲಾಗಿತ್ತು.ಇದರಲ್ಲಿ ಡಿಕೆಶಿ ಶ್ರದ್ಧಾಭಕ್ತಿಯಿಂದ ಭಾಗಿಯಾಗಿದ್ದರು.
ಶತ ಚಂಡಿಕಾ ಯಾಗದಲ್ಲಿ ಡಿ ಕೆ ಶಿವಕುಮಾರ್ ಭಾಗಿ
ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವ ಹಿನ್ನೆಲೆಯಲ್ಲಿ ಚಂಡಿಕಾಯಾಗ ಆಯೋಜನೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟನಾಯಕನಹಳ್ಳಿ ಸಂಸ್ಥಾನ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ವಿಶೇಷ ಪೂಜೆಯ ನೇತೃತ್ವವಹಿಸಿದ್ದರು.
ಶಲ್ಯ, ಪಂಚೆಧಾರಿಯಾಗಿ ಪೂಜೆಯಲ್ಲಿ ಡಿ ಕೆ ಶಿವಕುಮಾರ್ ಪಾಲ್ಗೊಂಡಿದ್ದರು. ಇದೇ ವೇಳೆ ಕುಣಿಗಲ್ ಶಾಸಕ ಡಾ.ರಂಗನಾಥ್ ಕೂಡ ಹಾಜರಿದ್ದರು.