ಕರ್ನಾಟಕ

karnataka

By

Published : Mar 9, 2021, 6:58 AM IST

ETV Bharat / state

ಕಾಡು ಗೊಲ್ಲ ಸಮುದಾಯದ ಮತ ಪಡೆಯಲು ಬಿಜೆಪಿ ಸುಳ್ಳು ಭರವಸೆ ನೀಡಿದೆ: ಕೆ ಎನ್ ರಾಜಣ್ಣ

ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಕೇವಲ 40 ಸಾವಿರ ಮತಗಳನ್ನು ಪಡೆಯಲು ಕಾಡುಗೊಲ್ಲ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಬಿಜೆಪಿಯವರು ಸುಳ್ಳು ಭರವಸೆ ನೀಡಿದ್ದರು ಎಂದು ಕೆ ಎನ್ ರಾಜಣ್ಣ ವಾಗ್ದಾಳಿ ನಡೆಸಿದ್ದಾರೆ.

Former MLA KN Rajanna Slams is BJP Govt in Tumakur
ಮಾಜಿ ಶಾಸಕ ಕೆ ಎನ್ ರಾಜಣ್ಣ ತಿಳಿಸಿದ್ದಾರೆ ಸುದ್ದಿಗೋಷ್ಠಿ

ತುಮಕೂರು :ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಮತ ಪಡೆಯಲು ಮಾತ್ರ ಬಿಜೆಪಿ ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದಾಗಿ ಹೇಳಿಕೆ ಕೊಟ್ಟಿತ್ತು. ಮೂರು ತಿಂಗಳು ಕಳೆಯಲಿ ಆಮೇಲೆ ಗೊತ್ತಾಗುತ್ತೆ ಅವರೇನು ಭರವಸೆ ಈಡೇರಿಸಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಮಾಜಿ ಶಾಸಕ ಕೆ ಎನ್ ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ಶಾಸಕ ಕೆ ಎನ್ ರಾಜಣ್ಣ ತಿಳಿಸಿದ್ದಾರೆ ಸುದ್ದಿಗೋಷ್ಠಿ

ನಗರದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿ, ಸುಮಾರು 6 ಲಕ್ಷ ಮಂದಿ ಕಾಡುಗೊಲ್ಲ ಸಮುದಾಯದವರು ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾಣ ಸಿಗುತ್ತಾರೆ. ರಾಜ್ಯಾದ್ಯಂತ ವಿವಿಧ ಹೆಸರಿನಲ್ಲಿ ಗೊಲ್ಲ ಸಮುದಾಯದವರು ಸುಮಾರು 40 ಲಕ್ಷ ಮಂದಿ ಇದ್ದಾರೆ, ಆದರೆ ಕೇವಲ 6 ಲಕ್ಷ ಮಂದಿ ಇರುವ ಕಾಡುಗೊಲ್ಲ ಸಮುದಾಯದವರಿಗೆ ಪ್ರತ್ಯೇಕ ನಿಗಮ ಭರವಸೆ ನೀಡಿರುವುದು ಸಾಕಷ್ಟು ಪ್ರಶ್ನಾರ್ಹವಾಗಿದೆ ಎಂದಿದ್ದಾರೆ.

ಓದಿ : ಶರ್ಟ್ ನಿಕಾಲೋ ಸಂಗಣ್ಣ... ಸದನದಲ್ಲಿ ಸಂಗಮೇಶ್ ಶರ್ಟ್ ಬಿಚ್ಚಿಸಿದ್ದು ಯಾರು ಗೊತ್ತಾ!?

ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಕೇವಲ 40 ಸಾವಿರ ಮತಗಳನ್ನು ಪಡೆಯಲು ಕಾಡು ಗೊಲ್ಲ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಬಿಜೆಪಿಯವರು ಭರವಸೆ ನೀಡಿದ್ದರು. ಮುಂಬರುವ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.

For All Latest Updates

ABOUT THE AUTHOR

...view details