ಕರ್ನಾಟಕ

karnataka

By

Published : Aug 31, 2020, 4:52 PM IST

Updated : Sep 1, 2020, 9:35 AM IST

ETV Bharat / state

ಬಿಜೆಪಿ ಕಾರ್ಯಕ್ರಮ ಮಾಡಿದ್ರೆ ಕಲ್ಲಿನಿಂದ ಹೊಡೆಸುವೆ ; ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ತುರುವೇಕೆರೆಗೆ ಬರುತ್ತಾರೆ ಎಂದರೆ ಗೌರವಯುತವಾಗಿ ನಡೆದುಕೊಳ್ಳಬೇಕು..

ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪ
ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪ

ತುಮಕೂರು :ತುರುವೇಕೆರೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದರೆ ನಾನು ಜನರಿಂದ ಕಲ್ಲಿನಲ್ಲಿ ಹೊಡೆಸುತ್ತೇನೆ ಎಂದು ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತುರುವೇಕೆರೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿ ತುರುವೇಕೆರೆಗೆ ಬರುತ್ತಾರೆ ಎಂದರೆ ಗೌರವಯುತವಾಗಿ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ತುರುವೇಕೆರೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ ಎಂದು ಗುಡುಗಿದರು.

ಮಾಜಿ ಶಾಸಕ ಎಂ ಟಿ ಕೃಷ್ಣಪ್ಪ

ಬಿಜೆಪಿಯವರು ಅಧಿಕಾರ ಇದೆ ಎಂದು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Last Updated : Sep 1, 2020, 9:35 AM IST

ABOUT THE AUTHOR

...view details