ಕರ್ನಾಟಕ

karnataka

ಸೋಲು ಸಹಿಸಲಾರದೆ ಸುರೇಶ್​ ಗೌಡ ವಿಚಿತ್ರ ಹೇಳಿಕೆ: ಜೆಡಿಎಸ್ ಶಾಸಕ ಗೌರಿಶಂಕರ್ ಆಕ್ರೋಶ

By

Published : Mar 29, 2019, 6:58 PM IST

ದೇವೇಗೌಡರ ಸ್ಪರ್ಧೆಯಿಂದ ದೊಡ್ಡ ಶಾಕ್ ನೀಡಿದ್ದಾರೆ. ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ನಮ್ಮ ತಂದೆ ಆರೋಗ್ಯ ಸುಧಾರಿಸಿದ್ರೆ ಸಾಕು ಅನ್ನೋ ಯೋಚನೆಯಲ್ಲಿದ್ದೇವೆ. ಮೊದಲು ಬಿಜೆಪಿಯವರು ಮಾಜಿ ಶಾಸಕ ಸುರೇಶ ಗೌಡರನ್ನು ಕರೆದು ಬುದ್ಧಿ ಹೇಳಬೇಕು ಎಂದರು.

ಜೆಡಿಎಸ್ ಶಾಸಕ ಗೌರಿಶಂಕರ್

ತುಮಕೂರು : ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡ ಹಿಂದಿನ ಸೋಲನ್ನು ಅರಗಿಸಿಕೊಳ್ಳಲಾಗದೆ, ವಿಚಿತ್ರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಸ್ಪರ್ಧೆಯಿಂದ ದೊಡ್ಡ ಶಾಕ್ ನೀಡಿದ್ದಾರೆ. ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸಿದ್ರೆ ಸಾಕು ಅನ್ನೋ ಯೋಚನೆಯಲ್ಲಿದ್ದೇವೆ ಎಂದರು.

ಜೆಡಿಎಸ್ ಶಾಸಕ ಗೌರಿಶಂಕರ್

ಬಿಜೆಪಿ ಮುಖಂಡರು ಮಾಜಿ ಶಾಸಕ ಸುರೇಶ ಗೌಡರನ್ನು ಕರೆದು ಬುದ್ಧಿ ಹೇಳಬೇಕು. ಚುನಾವಣೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಸುರೇಶ್ ಗೌಡ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದರು.

ಅಲ್ಲದೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುವುದಾಗಿ ತಿಳಿಸಿದರು. ನಮ್ಮ ಕುಟುಂಬ ಹಾಗೂ ದೇವೇಗೌಡ, ಕುಮಾರಸ್ವಾಮಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

For All Latest Updates

TAGGED:

tumakuru

ABOUT THE AUTHOR

...view details