ತುಮಕೂರು: ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಅನ್ವಯ ಶಾಸಕ ಜ್ಯೋತಿ ಗಣೇಶ್ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನ್ಯಾಯಬೆಲೆ ಅಂಗಡಿಗಳಿಗೆ ಶಾಸಕರ ದಿಢೀರ್ ಭೇಟಿ, ಪರಿಶೀಲನೆ - ನ್ಯಾಯ ಬೆಲೆ ಅಂಗಡಿಗಳಿಗೆ ಶಾಸಕರ ದಿಢೀರ್ ಭೇಟಿ
ತುಮಕೂರಿನಲ್ಲಿ ಪಡಿತರ ವಿತರಣೆಗೆ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಮೇಲೆ ಶಾಸಕ ಜ್ಯೋತಿ ಗಣೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![ನ್ಯಾಯಬೆಲೆ ಅಂಗಡಿಗಳಿಗೆ ಶಾಸಕರ ದಿಢೀರ್ ಭೇಟಿ, ಪರಿಶೀಲನೆ Fraud in ration shops](https://etvbharatimages.akamaized.net/etvbharat/prod-images/768-512-6724530-188-6724530-1586428470497.jpg)
ನ್ಯಾಯಬೆಲೆ ಅಂಗಡಿಗಳಿಗೆ ಶಾಸಕರ ದಿಢೀರ್ ಭೇಟಿ
ಕೊರೊನಾ ಸೋಂಕಿನ ಹಿನ್ನೆಲೆ ಸಂಕಷ್ಟದಲ್ಲಿನ ಜನರಿಗೆ ಉಚಿತವಾಗಿ ಅಕ್ಕಿ ಮತ್ತು ಗೋಧಿ ವಿತರಿಸುವಂತೆ ಸರ್ಕಾರ ಸೂಚನೆ ನೀಡಿದ್ದರೂ ನ್ಯಾಯಬೆಲೆ ಅಂಗಡಿ ಮಾಲೀಕರು ವಂಚಿಸುವ ಪ್ರಕರಣಗಳು ಕೇಳಿಬರುತ್ತಿವೆ. ಅದಕ್ಕಾಗಿ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ನಗರದ 5 ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದರು. ವಂಚನೆ ಕಂಡುಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
Last Updated : Apr 10, 2020, 9:57 AM IST