ಕರ್ನಾಟಕ

karnataka

By

Published : Dec 17, 2019, 2:04 PM IST

ETV Bharat / state

ಸೋಲಾರ್​ ಪಾರ್ಕ್​ಗೆ ಭೂಮಿ ನೀಡಿದವರ ಭರವಸೆ ಈಡೇರಿಸಿ: ಸಾಂಬಸದಾಶಿವರೆಡ್ಡಿ

ತುಮಕೂರಿನ ಪಾವಗಡದಲ್ಲಿ ಸೋಲಾರ್​ ಪಾರ್ಕ್​ ನಿರ್ಮಿಸುವ ಮುನ್ನ ನೀಡಿದ ಬೇಡಿಕೆ ಈಡೇರಿಸುವಂತೆ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪಿ ಸಾಂಬಸದಾಶಿವರೆಡ್ಡಿ ಒತ್ತಾಯಿಸಿದರು.

r.p.sambasadashivareddy
ಆರ್.ಪಿ ಸಾಂಬಸದಾಶಿವರೆಡ್ಡಿ

ತುಮಕೂರು: ಪಾವಗಡದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವ ಮುನ್ನ ನೀಡಿದ್ದ ಭರವಸೆಯಂತೆ ಸ್ಥಳೀಯ ಯುವಕ-ಯುವತಿಯರಿಗೆ ಉದ್ಯೋಗ ನೀಡಿ, ಯೋಜನೆಯಡಿ ಒಳಪಡುವ ಗ್ರಾಮಗಳ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪಿ ಸಾಂಬಸದಾಶಿವರೆಡ್ಡಿ ಒತ್ತಾಯಿಸಿದರು.

ಆರ್.ಪಿ ಸಾಂಬಸದಾಶಿವರೆಡ್ಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಾರ್ ಪಾರ್ಕ್​ಗೆ ಜಮೀನು ನೀಡಿರುವ ಪ್ರತಿಯೊಬ್ಬ ರೈತನ ಜಮೀನಿಗೆ ಇರುವ ಚಕ್ ಬಂದಿಯನ್ನು ಗುರುತಿಸಿ, ಸರ್ವೆ ನಂಬರ್ ಹಾಗೂ ರೈತರ ಹೆಸರನ್ನು ಒಳಗೊಂಡ ನಾಮಫಲಕವನ್ನು ಅಳವಡಿಸಬೇಕು. ರೈತರು ತಮ್ಮ ಜಮೀನುಗಳನ್ನು 28 ವರ್ಷಗಳವರೆಗೆ ಬಾಡಿಗೆ ನೀಡಲಾಗಿದೆ. ಈ ಜಮೀನು ನಮ್ಮದೇ ಎಂದು ಗುರುತಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ನಾಮಫಲಕಗಳನ್ನು ಅಳವಡಿಸುವುದು ಅತ್ಯಾವಶ್ಯಕವಾಗಿದೆ ಎಂದರು.

ಸೋಲಾರ್ ಪಾರ್ಕ್ ಇರುವ ಹಳ್ಳಿಗಳಲ್ಲಿ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು ಪೂರೈಕೆ, ಒಳಚರಂಡಿ ವ್ಯವಸ್ಥೆ ಕಲ್ಪಿಸುವುದು, ಶಿಥಿಲಗೊಂಡಿರುವ ಶಾಲೆಗಳನ್ನು ಅಭಿವೃದ್ಧಿಪಡಿಸುವುದು, ಸೋಲಾರ್ ಪಾರ್ಕ್​ಗೆ ಜಮೀನು ನೀಡಿರುವ ಗ್ರಾಮಗಳಿಗೆ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆ ಕಲ್ಪಿಸಬೇಕು ಎಂಬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ABOUT THE AUTHOR

...view details