ಕರ್ನಾಟಕ

karnataka

ETV Bharat / state

ಮಾಧುಸ್ವಾಮಿ ಸಚಿವರಾಗಿ ಮುಂದುವರೆದ್ರೆ ಒಳ್ಳೆಯದು ; ಜೆಡಿಎಸ್ ಶಾಸಕ ಶ್ರೀನಿವಾಸ್ - mla srinivas statement on jc madhuswamy

ಬದಲಾಗಿ ಜಿಲ್ಲೆಯಲ್ಲಿ ಬಹುತೇಕ ಕೆರೆಗಳಿಗೆ ನೀರು ತುಂಬಿಸುವ ಉತ್ತಮ ಯೋಜನೆಯನ್ನು ಅವರು ರೂಪಿಸಿದ್ದಾರೆ, ಅದು ಸಂಪೂರ್ಣವಾಗಿ ಅನುಷ್ಠಾನವಾಗಬೇಕಿದೆ. ಹೀಗಾಗಿ, ಅವರೇ ಮುಂದುವರೆಯಬೇಕು ಎಂದು ಹೇಳುತ್ತೇನೆ ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮಾಧುಸ್ವಾಮಿ ಮುಂದುವರೆಯಲಿ..

madhuswamy can continue as minister says mla srinivas
ಜೆಡಿಎಸ್ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ

By

Published : Jul 27, 2021, 5:40 PM IST

ತುಮಕೂರು :ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಸಚಿವ ಸಂಪುಟದಲ್ಲಿ ಜೆ ಸಿ ಮಧುಸ್ವಾಮಿ ಸಚಿವರಾಗಿ, ಜಿಲ್ಲೆಯ ಉಸ್ತುವಾರಿಯಾಗಿ ಮುಂದುವರೆದರೆ ಒಳ್ಳೆಯದು ಎಂದು ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ ಪ್ರತಿಕ್ರಿಯಿಸಿದ್ದಾರೆ.

ಜೆಡಿಎಸ್ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ

ಗುಬ್ಬಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಪರ ಚಿಂತನೆಗಳ ದೃಷ್ಟಿಯಿಂದ ಮಾಧುಸ್ವಾಮಿ ಮುಂದುವರೆಯಬೇಕು ಎಂದು ಹೇಳಿದ್ದಾರೆ. ನಾನು ವೈಯಕ್ತಿಕವಾಗಿ ಮಾಧುಸ್ವಾಮಿಯವರು ಮುಂದುವರೆಯಬೇಕು ಎಂದು ಹೇಳುತ್ತಿಲ್ಲ.

ಬದಲಾಗಿ ಜಿಲ್ಲೆಯಲ್ಲಿ ಬಹುತೇಕ ಕೆರೆಗಳಿಗೆ ನೀರು ತುಂಬಿಸುವ ಉತ್ತಮ ಯೋಜನೆಯನ್ನು ಅವರು ರೂಪಿಸಿದ್ದಾರೆ, ಅದು ಸಂಪೂರ್ಣವಾಗಿ ಅನುಷ್ಠಾನವಾಗಬೇಕಿದೆ. ಹೀಗಾಗಿ, ಅವರೇ ಮುಂದುವರೆಯಬೇಕು ಎಂದು ಹೇಳುತ್ತೇನೆ ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮಾಧುಸ್ವಾಮಿ ಮುಂದುವರೆಯಲಿ ಎಂದು ಹೇಳುತ್ತೇನೆ ಎಂದು ಪುನರುಚ್ಛರಿಸಿದರು.

ಇದನ್ನೂ ಓದಿ:ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ: ಕೆ.ಎಸ್​. ಈಶ್ವರಪ್ಪ

For All Latest Updates

ABOUT THE AUTHOR

...view details