ತುಮಕೂರು: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನ ಭೀಕರ ಹತ್ಯೆ ನಡೆದಿದೆ. ಮುಬಾರಕ್ ಪಾಷಾ ಕೊಲೆಯಾದ ದುರ್ದೈವಿ. ತುಮಕೂರು ನಗರದ ಜಿಸಿಆರ್ ಕಾಲೋನಿ ನಿವಾಸಿಯಾದ ಇವರು ಕಳೆದ ರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ, ಯಾರೋ ಅಪರಿಚಿತರು ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿದ್ದಾರೆ.
ಕೊಲೆಯಾದ ವ್ಯಕ್ತಿ ನಗರದ ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡಿಕೊಂಡಿದ್ದರು. ಯಾರೊಂದಿಗೋ ಗಲಾಟೆ ಮಾಡಿಕೊಂಡ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.