ತುಮಕೂರು :ಕೊರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಬಹುತೇಕ ಸರ್ಕಾರಿ ಕಾರ್ಯಕ್ರಮಗಳು ಸ್ಥಗಿತಗೊಂಡಿವೆ. ಅದರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿದ್ದ ಸಾಮೂಹಿಕ ಸೀಮಂತ ಕಾರ್ಯಕ್ರಮ ಕೂಡ ಆಯೋಜನೆಗೊಂಡಿಲ್ಲ.
ಇನ್ನು ಗ್ರಾಮೀಣ ಪ್ರದೇಶದ ಬಡ ಹೆಣ್ಣುಮಕ್ಕಳು ಗರ್ಭಿಣಿಯರಾದ ನಂತರ ಸೀಮಂತ ಕಾರ್ಯಕ್ರಮದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ತಾಲೂಕಿನ ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಸರಳವಾಗಿ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಚರಿಸಲಾಯಿತು.