ಕರ್ನಾಟಕ

karnataka

ETV Bharat / state

ತುಮಕೂರಿನ ಸಿದ್ದಗಂಗಾ ಮಠಕ್ಕೆ ನೂತನ ಸಚಿವ ವಿ. ಸೋಮಣ್ಣ ಭೇಟಿ

ನೂತನ ಸಚಿವ ವಿ. ಸೋಮಣ್ಣ ಕುಟುಂಬ ಸಮೇತ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಯ ಗದ್ದುಗೆ ನಮನ ಸಲ್ಲಿಸಿದರು.

By

Published : Aug 21, 2019, 1:55 AM IST

ವಿ. ಸೋಮಣ್ಣ

ತುಮಕೂರು: ನನ್ನಂತಹ ಲಕ್ಷಾಂತರ ಜನರಿಗೆ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಆಶೀರ್ವಾದವಿದೆ. ನನ್ನ ಬದುಕಿನಲ್ಲಿ ನಾನು ಏನು ಪಡೆದಿದ್ದೇನೆಯೋ ಅದರಲ್ಲಿ ಅವರ ಕೃಪಾಶೀರ್ವಾದ ಜಾಸ್ತಿ ಇದೆ ಎಂದು ನೂತನ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಸಿದ್ದಗಂಗಾ ಮಠಕ್ಕೆ ನೂತನ ಸಚಿವ ವಿ. ಸೋಮಣ್ಣ ಭೇಟಿ

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರತಿಬಾರಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆದು ಹೋಗುತ್ತಿದ್ದೆ. ಆದರೆ ಈ ಬಾರಿ ಅವರ ಅನುಪಸ್ಥಿತಿಯಲ್ಲಿ ಮತ್ತು ಸಿದ್ದಲಿಂಗ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಆಶೀರ್ವಾದ ಪಡೆದಿದ್ದೇನೆ. ಸಿದ್ದಗಂಗಾ ಮಠಕ್ಕೆ ಬಂದರೆ ಸಮಾಧಾನ ಲಭಿಸಲಿದೆ ಎಂದರು.

ಪ್ರತಿಯೊಂದು ಇಲಾಖೆಯಲ್ಲಿಯೂ ಒಂದು ಶಕ್ತಿ ಇದೆ. ಪಕ್ಷದ ಹಿರಿಯರು ಯಾವ ರೀತಿ ಜವಾಬ್ದಾರಿ ಕೊಡುತ್ತಾರೆ ಅದನ್ನು ನಿಭಾಯಿಸಿಕೊಂಡು ಹೋಗಬೇಕು. ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನವಿರುತ್ತದೆ. ಶಾಸಕ ತಿಪ್ಪಾರೆಡ್ಡಿ ಮತ್ತು ಉಮೇಶ್ ಕತ್ತಿ ಹಿರಿಯ ಮುಖಂಡರಿದ್ದಾರೆ. ಅದೆಲ್ಲಕ್ಕಿಂತ ಮುಖ್ಯವಾಗಿ ರಾಜ್ಯದ ಅಭಿವೃದ್ಧಿ ನಮಗೆ ಮೂಲಮಂತ್ರವಾಗಿದೆ ಎಂದರು.

ನೆರೆಪೀಡಿತ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿ ಮುಖ್ಯಮಂತ್ರಿಗಳಿಗೆ ವರದಿಯನ್ನು ಕೊಡಲಾಗುವುದು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಮಠದಲ್ಲಿ ಇರುವಂತಹ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಸಚಿವ ಸೋಮಣ್ಣ ಕುಟುಂಬ ಸಮೇತರಾಗಿ ಬಂದು ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಮತ್ತು ವಿವಿಧ ಬಿಜೆಪಿ ಮುಖಂಡರು ಹಾಜರಿದ್ದರು.

ABOUT THE AUTHOR

...view details