ಕರ್ನಾಟಕ

karnataka

By

Published : May 20, 2019, 6:53 PM IST

ETV Bharat / state

ಫೇಸ್​ಬುಕ್​ನಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಶಿರಾ ಶಾಸಕ ಗರಂ

ತಮ್ಮ ಕುರಿತು ಫೇಸ್​ಬುಕ್​ನಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಶಿರಾ ಶಾಸಕ ಸತ್ಯನಾರಾಯಣ ಸಿಡಿಮಿಡಿಗೊಂಡಿದ್ದಾರೆ. ತನ್ನ ಆರೋಗ್ಯದ ಕುರಿತು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಯಾವುದೇ ಊಹಾಪೋಹಗಳನ್ನು ನಂಬಬೇಡಿ ಎಂದು ಕ್ಷೇತ್ರದ ಜನರಿಗೆ ತಿಳಿಸಿದ್ದಾರೆ.

ಶಿರಾ ಶಾಸಕ ಸತ್ಯನಾರಾಯಣ

ತುಮಕೂರು : ಶಾಸಕರ ಆರೋಗ್ಯ ಸರಿ ಇಲ್ಲವೆಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇದು ಸತ್ಯಕ್ಕೆ ದೂರವಾದುದು ಎಂದು ಶಿರಾ ಜೆಡಿಎಸ್ ಶಾಸಕ ಸತ್ಯನಾರಾಯಣ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

'ನನ್ನ ಆರೋಗ್ಯದ ಕುರಿತು ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಯಾವುದೇ ಊಹಾಪೋಹಗಳನ್ನು ನಂಬಬೇಡಿ ನಾನು ಆರೋಗ್ಯವಾಗಿದ್ದು, ದೈನಂದಿನ ಕಾರ್ಯ ಕಲಾಪಗಳಲ್ಲಿ ತೊಡಗಿಸಿಕೊಂಡಿದ್ದೇನೆ' ಅಂತಾ ಫೇಸ್ಬುಕ್​ನಲ್ಲಿ ಶಾಸಕ ಸ್ಟೇಟಸ್ ಹಾಕಿದ್ದಾರೆ.

ನಿರಂತರವಾಗಿ ಇಂತಹ ವದಂತಿಗಳಿಗೆ ಶಾಸಕ ಸತ್ಯನಾರಾಯಣ್ ಬೇಸತ್ತು ಹೋಗಿದ್ದಾರೆ. ಈ ಹಿಂದೆ ಸತ್ಯನಾರಾಯಣ್ ಮರೆವು, ಸೇರಿದಂತೆ ಹಲವು ಸಮಸ್ಯೆಗಳಿಂದ ನರಳುತ್ತಿದ್ದಾರೆಂದು ವದಂತಿ ಹಬ್ಬಿಸಲಾಗಿತ್ತು. ಇನ್ನು ಶಾಸಕರ ಅನಾರೋಗ್ಯ ಹಿನ್ನೆಲೆ ಕ್ಷೇತ್ರದಲ್ಲಿ ಅವಧಿಪೂರ್ವದಲ್ಲೇ ಶಿರಾದಲ್ಲಿ ಉಪಚುನಾವಣೆ ನಡೆಯುತ್ತಿದೆ ಎಂಬ ವದಂತಿ ಹಬ್ಬಿಸಲಾಗಿತ್ತು ಎಂದು ಹೇಳಲಾಗ್ತಿದೆ.

ABOUT THE AUTHOR

...view details