ಕರ್ನಾಟಕ

karnataka

ETV Bharat / state

ತುಮಕೂರು: ವೈದ್ಯರಿಲ್ಲದ್ದಕ್ಕೆ ನರ್ಸ್​ಗಳಿಂದ ಚಿಕಿತ್ಸೆ.. ತಾಯಿ - ಮಗು ಸಾವು - ತುಮಕೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿ

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ್ದಕ್ಕೆ ನರ್ಸ್​ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಹಾಗೂ ತಾಯಿ ಬಲಿಯಾಗಿರೋ ಆರೋಪ ಪ್ರಕರಣ ತುಮಕೂರಿನಲ್ಲಿ ನಡೆದಿದೆ. ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

mother-child-died-by-doctor-negligence
ತುಮಕೂರು

By

Published : Feb 24, 2022, 7:26 PM IST

Updated : Feb 24, 2022, 7:47 PM IST

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್​ಗಳ ಎಡವಟ್ಟಿನಿಂದ ತಾಯಿ-ಮಗು ಬಲಿಯಾಗಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಮಧುಗಿರಿ ತಾಲೂಕಿನ ಬ್ರಹ್ಮದೇವರಹಳ್ಳಿ ಗ್ರಾಮದ ನಿವಾಸಿ ಕಮಲಮ್ಮ ಮೃತರು. ಹೆರಿಗೆಗೆ ಹೊಸಕೆರೆ ಆಸ್ಪತ್ರೆಗೆ ಬಂದಿದ್ದ ವೇಳೆ ಈ ಅವಘಡ ನಡೆದಿದೆ.

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಅಲ್ಲಿನ ನರ್ಸ್​ಗಳೇ ಚಿಕಿತ್ಸೆ ನೀಡಿದ್ದರಿಂದ ಹಸುಗೂಸು ಮೃತಪಟ್ಟಿದೆ. ನಂತರ ತಾಯಿ ಚಿಂತಾಜನಕ ಸ್ಥಿತಿಯಲ್ಲಿದ್ದರಿಂದ ಆ್ಯಂಬುಲೆನ್ಸ್ ಇಲ್ಲದೇ ಕಮಲಮ್ಮ ಕುಟುಂಬಸ್ಥರು ಪರದಾಡಿದ್ದಾರೆ. ನಂತರ ಅವರನ್ನು ಕಾರಿನಲ್ಲಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ತಾಯಿ ಕೂಡ ಮೃತಪಟ್ಟಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಹಸುಗೂಸು ಹಾಗೂ ತಾಯಿ ಬಲಿಯಾಗಿರೋ ಆರೋಪ ಮೃತರ ಕುಟುಂಬಸ್ಥರದ್ದಾಗಿದೆ. ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಮೃತ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ:ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಚಿವಾಲಯದ ನೌಕರರ ಸಂಘದದಿಂದ ಪ್ರತಿಭಟನೆ!

Last Updated : Feb 24, 2022, 7:47 PM IST

For All Latest Updates

ABOUT THE AUTHOR

...view details