ಕರ್ನಾಟಕ

karnataka

ETV Bharat / state

ಗುಬ್ಬಿಯಲ್ಲಿ ಹಾಡಹಗಲೇ ಡಿಎಸ್ಎಸ್ ಮುಖಂಡನ ಕೊಚ್ಚಿ ಕೊಲೆ

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಡಿಎಸ್‌ಎಸ್ ಮುಖಂಡನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

By

Published : Jun 15, 2022, 4:01 PM IST

Updated : Jun 15, 2022, 5:47 PM IST

the-murder-of-dss-leader-in-tumkur
ಗುಬ್ಬಿ ಪಟ್ಟಣದಲ್ಲಿ ಹಾಡುಹಗಲೇ ಡಿಎಸ್ಎಸ್ ಮುಖಂಡನ ಬರ್ಬರ ಕೊಲೆ

ತುಮಕೂರು: ಡಿಎಸ್ಎಸ್ ಮುಖಂಡ ನರಸಿಂಹಮೂರ್ತಿ (45) ಎಂಬವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಗುಬ್ಬಿ ಪಟ್ಟಣದ ಬಿ.ಎಸ್.ರಸ್ತೆಯಲ್ಲಿ ಘಟನೆ ನಡೆದಿದೆ.

ಡಿಎಸ್ಎಸ್ ತಾಲ್ಲೂಕು ಸಂಚಾಲಕನಾಗಿದ್ದ ನರಸಿಂಹ ಮೂರ್ತಿ, ಮಧ್ಯಾಹ್ನ ಟೀ ಅಂಗಡಿ ಮುಂದೆ ಕುಳಿತಿದ್ದರು. ಈ ಸಂದರ್ಭದಲ್ಲಿ ದಾಳಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ:ಪತ್ನಿ ರೊಟ್ಟಿ ಮಾಡಿಕೊಡದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

Last Updated : Jun 15, 2022, 5:47 PM IST

ABOUT THE AUTHOR

...view details