ತುಮಕೂರು :ವೈದ್ಯರ ಕೊರತೆ ಹಾಗೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ಅನಾರೋಗ್ಯಪೀಡಿತ ವೃದ್ಧೆ ಸಾವನ್ನಪ್ಪಿರುವುದಾಗಿ ವೃದ್ಧೆ ಕುಟುಂಬಸ್ಥರು ಆರೋಪಿಸಿದ್ದಾರೆ.
ತುಮಕೂರು ಜಿಲ್ಲೆಯ ಹೊನ್ನುಡಿಕೆ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಹೊನ್ನುಡಿಕೆ ಗ್ರಾಮದ ತಿಮ್ಮಕ್ಕ (60) ಮೃತ ದುರ್ದೈವಿಯಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಡಿ.ಸಿ ಗೌರಿಶಂಕರ್ ವೈದ್ಯರ ಕೊರತೆ ಇರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನ ತರಾಟೆಗೆ ತಗೆದುಕೊಂಡಿದ್ದಾರೆ.