ತುಮಕೂರು: ಹೊರ ರಾಜ್ಯದ ಕಾರ್ಮಿಕರಿಗೆ ಊರುಗಳಿಗೆ ತೆರಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಇನ್ನೊಂದೆಡೆ, ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿದ್ದ ಎತ್ತಿನಹೊಳೆ ಕಾಮಗಾರಿ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಹೊರ ರಾಜ್ಯದ ಕಾರ್ಮಿಕರಿಗೆ ದಿಕ್ಕೇ ತೋಚದಂತಾಗಿದೆ.
ಮರಳಿ ಗೂಡು ಸೇರಿಕೊಳ್ಳಲು ಹಾತೊರೆಯುತ್ತಿರುವ ಹೊರ ರಾಜ್ಯದ ಕಾರ್ಮಿಕರು - immigrents workers
ಲಾಕ್ಡೌನ್ನಿಂದಾಗಿ ಬೇರೆ ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಸಿಲುಕಿವವರು ಮರಳಿ ತಮ್ಮ ಊರುಗಳಿಗೆ ತೆರಳಲು ಸರ್ಕಾರ ಅವಕಾಶ ನೀಡಿದೆ. ಆದರೆ ತುಮಕೂರಿನ ಎತ್ತಿನಹೊಳೆ ಕಾಮಗಾರಿಗಾಗಿ ಹೊರ ರಾಜ್ಯದಿಂದ ಆಗಮಿಸಿರುವ ಕಾರ್ಮಿಕರು ತಮ್ಮ ಸ್ವಂತ ಊರಿಗೆ ತರೆಳಲಾಗದೆ ಪರಿತಪಿಸುತ್ತಿದ್ದಾರೆ.

ಮರಳಿ ಗೂಡು ಸೇರಿಕೊಳ್ಳಲು ಹಾತೊರೆಯುತ್ತಿರುವ ಹೊರ ರಾಜ್ಯದ ಕಾರ್ಮಿಕರು
20 ಮಂದಿ ಹೊರರಾಜ್ಯದ ಕಾರ್ಮಿಕರು ವಾಪಸ್ ತಮ್ಮ ಊರುಗಳಿಗೆ ತೆರಳಲು ಹೆಣಗಾಡುತ್ತಿದ್ದಾರೆ. ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್ ಮೂಲದ ಕಾರ್ಮಿಕರಾಗಿದ್ದು ಹಲವುದಿನಗಳಿಂದ ಕಾಮಗಾರಿ ಸ್ಥಗಿತಗೊಂಡಿದ್ದರೂ ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗಿರಲಿಲ್ಲ.
ಕಳೆದ ಎರಡು ತಿಂಗಳಿನಿಂದ ಗುತ್ತಿಗೆದಾರರಿಂದ ಯಾವುದೇ ರೀತಿಯ ವೇತನ ಕೂಡ ಬಂದಿಲ್ಲ, ಕೆಲಸ ಮಾಡಲು ಗುತ್ತಿಗೆದಾರರು ಒತ್ತಡ ಹೇರುತ್ತಿದ್ದಾರೆ. ತಮ್ಮ ಬಳಿ ಪಡಿತರ ಕೂಡ ಸಮರ್ಪಕವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.