ತುಮಕೂರು:ಬಹು ಅಂಗಾಂಗ ವೈಫಲ್ಯದಿಂದ ನಿನ್ನೆ ನಿಧನರಾದ ಶಾಸಕ ಸತ್ಯನಾರಾಯಣ ಅವರ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಶಿರಾ ತಾಲೂಕಿನ ಬೂವನಹಳ್ಳಿಯಲ್ಲಿ ಸಕಲ ಸಿದ್ಧತೆ ನಡೆದಿದೆ.
ಶಿರಾ ತಾಲೂಕಿನ ಬೂವನಹಳ್ಳಿಯಲ್ಲಿ ಶಾಸಕ ಸತ್ಯನಾರಾಯಣ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ - ಶಾಸಕ ಸತ್ಯನಾರಾಯಣ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಶಾಸಕ ಸತ್ಯನಾರಾಯಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ವಿಶೇಷ ವಾಹನದಲ್ಲಿ ಪಾರ್ಥಿವ ಶರೀರವನ್ನು ತುಮಕೂರಿಗೆ ತರಲಾಗುತ್ತಿದೆ.
![ಶಿರಾ ತಾಲೂಕಿನ ಬೂವನಹಳ್ಳಿಯಲ್ಲಿ ಶಾಸಕ ಸತ್ಯನಾರಾಯಣ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ preparation-for-mla-satyanarayan-funeral-in-sira](https://etvbharatimages.akamaized.net/etvbharat/prod-images/768-512-8298669-thumbnail-3x2-news.jpg)
ಶಾಸಕ ಸತ್ಯನಾರಾಯಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಅಮ್ಮಾಜಮ್ಮ, ಪುತ್ರ ಪ್ರಕಾಶ್ ಹಾಗೂ ನಾಲ್ವರು ಹೆಣ್ಣು ಮಕ್ಕಳಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ವಿಶೇಷ ವಾಹನದಲ್ಲಿ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.
ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ನಂತರ ತುಮಕೂರು ನಗರದ ಗಾಜಿನ ಮನೆ ಅವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ವೇಳೆಗೆ ಸತ್ಯನಾರಾಯಣ ಅವರ ಹುಟ್ಟೂರಾದ ಶಿರಾ ತಾಲೂಕಿನ ಬೂವನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.