ಕರ್ನಾಟಕ

karnataka

By

Published : Aug 30, 2019, 8:25 PM IST

ETV Bharat / state

ತುಮಕೂರು: ವಾಹನ ಬಿಡಿಭಾಗಗಳ ಜಿಎಸ್​ಟಿ ಕಡಿಮೆಗೆ ಒತ್ತಾಯಿಸಿ ಪ್ರತಿಭಟನೆ

ವಾಹನದ ಬಿಡಿಭಾಗಗಳ ಮೇಲಿನ ಜಿಎಸ್​ಟಿ ದರವನ್ನು ಕಡಿಮೆ ಮಾಡುವುದರ ಜೊತೆಗೆ ದೇಶಿ ಮಾರುಕಟ್ಟೆಯನ್ನು ಬಲಿಷ್ಠಗೊಳಿಸುವಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಾಹನ ಬಿಡಿ ಭಾಗಗಳ ಉತ್ಪಾದನಾ ಕಾರ್ಮಿಕರಿಂದ ಪ್ರತಿಭಟನೆ ನಡೆಸಲಾಯಿತು.

ವಾಹನ ಬಿಡಿ ಭಾಗಗಳ ಉತ್ಪಾದನಾ ಕಾರ್ಮಿಕರಿಂದ ಪ್ರತಿಭಟನೆ

ತುಮಕೂರು: ವಾಹನದ ಬಿಡಿಭಾಗಗಳ ಮೇಲಿನ ಜಿಎಸ್​ಟಿ ದರವನ್ನು ಕಡಿಮೆ ಮಾಡುವುದರ ಜೊತೆಗೆ ದೇಶಿ ಮಾರುಕಟ್ಟೆಯನ್ನು ಬಲಿಷ್ಠಗೊಳಿಸುವಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವಾಹನ ಬಿಡಿ ಭಾಗಗಳ ಉತ್ಪಾದನಾ ಕಾರ್ಮಿಕರಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಚರ್ಚ್ ವೃತ್ತದ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ವಾಹನ ಬಿಡಿ ಭಾಗಗಳ ಉತ್ಪಾದನಾ ಕಾರ್ಮಿಕರಿಂದ ಪ್ರತಿಭಟನೆ

ವಾಹನ ಬಿಡಿ ಭಾಗಗಳ ಮೇಲಿನ ಜಿಎಸ್​ಟಿ ದರವನ್ನು ಕಡಿತಗೊಳಿಸಬೇಕು. ಕಾಯಂ ಹಾಗೂ ತಾತ್ಕಾಲಿಕ ಕಾರ್ಮಿಕರನ್ನು ಕೆಲಸದಿಂದ ತೆಗೆಯುತ್ತಿರುವುದನ್ನು ನಿಲ್ಲಿಸಬೇಕು. ಬಿಡಿ ಭಾಗಗಳ ಆಮದನ್ನು ನಿರ್ಬಂಧಿಸಿ, ದೇಶೀಯ ಮಾರುಕಟ್ಟೆಯಿಂದಲೇ ಬಿಡಿಭಾಗಗಳನ್ನು ಕೊಳ್ಳಲು ಕಡ್ಡಾಯಗೊಳಿಸುವ ಶಾಸನವನ್ನು ಸರ್ಕಾರ ರೂಪಿಸಬೇಕು. ದೇಶೀಯ ಮಾರುಕಟ್ಟೆಯನ್ನು ಬಲಗೊಳಿಸಲು ಅಗತ್ಯವಾದ ನೀತಿಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details