ಕರ್ನಾಟಕ

karnataka

By

Published : Aug 29, 2019, 7:57 PM IST

ETV Bharat / state

ವೇಶ್ಯಾವಾಟಿಕೆಯಲ್ಲಿ ಸಿಕ್ಕಿಕೊಂಡವನನ್ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕೂರಿಸುವುದು ಸರಿಯಲ್ಲ; ಆರ್. ರಾಜೇಂದ್ರ

ವೇಶ್ಯಾವಾಟಿಕೆಯಲ್ಲಿ ಸಿಕ್ಕಿಹಾಕಿಕೊಂಡವನನ್ನ ಮತ್ತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕೂರಿಸಿರುವುದು ಸರಿಯಲ್ಲ, ಇವರನ್ನು ಬಿಟ್ಟರೆ ಬೇರೆ ಯಾರು ಸಮರ್ಥವಾದ ಅಭ್ಯರ್ಥಿ ಇಲ್ಲವೇ, ಹಾಗಾಗಿ ಇವರ ವಿರುದ್ಧವಾಗಿ ಸತ್ಯಶೋಧನಾ ಸಮಿತಿಗೆ ದೂರು ನೀಡಲಾಗಿದೆ ಎಂದು ರಾಜ್ಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಆರ್. ರಾಜೇಂದ್ರ ತಿಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ರಾಜ್ಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಆರ್. ರಾಜೇಂದ್ರ ಮಾತನಾಡಿದ್ದಾರೆ

ತುಮಕೂರು: ವೇಶ್ಯಾವಾಟಿಕೆಯಲ್ಲಿ ಸಿಕ್ಕಿಹಾಕಿಕೊಂಡವನನ್ನ ಮತ್ತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕೂರಿಸಿರುವುದು ಸರಿಯಲ್ಲ, ಇವರನ್ನು ಬಿಟ್ಟರೆ ಬೇರೆ ಯಾರು ಸಮರ್ಥವಾದ ಅಭ್ಯರ್ಥಿ ಇಲ್ಲವೇ, ಹಾಗಾಗಿ ಇವರ ವಿರುದ್ಧವಾಗಿ ಸತ್ಯಶೋಧನಾ ಸಮಿತಿಗೆ ದೂರು ನೀಡಲಾಗಿದೆ ಎಂದು ರಾಜ್ಯ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಆರ್. ರಾಜೇಂದ್ರ ತಿಳಿಸಿದರು.

ಜಿಲ್ಲಾಧ್ಯಕ್ಷ ರಾಮಕೃಷ್ಣ ಅವರ ಬಗ್ಗೆ ಸತ್ಯ ಶೋಧನಾ ಸಮಿತಿಗೆ ದೂರು ನೀಡಲಾಗಿದೆ. ಈ ಜಿಲ್ಲಾಧ್ಯಕ್ಷರು ವೇಶ್ಯಾವಾಟಿಕೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದವರ , ಇವರನ್ನು ಮತ್ತೆ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕೂರಿಸಿರುವುದು ಸರಿಯಲ್ಲ, ಇವರನ್ನು ಬಿಟ್ಟರೆ ಬೇರೆ ಯಾರು ಸಮರ್ಥ ಅಭ್ಯರ್ಥಿ ಇಲ್ಲವೇ ಎಂದು ಪ್ರಶ್ನಿಸಿದರು. ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ 10 ಪರ್ಸೆಂಟ್ ಗಿರಾಕಿಯ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಮೂಲಕ ತಲೆ ಹಿಡಿಯುವ ಕೆಲಸ ಮಾಡುತ್ತಿದ್ದಾರೆ ಇಂತಹ ವ್ಯಕ್ತಿಯನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಕೂರಿಸಿದರೆ ಪಕ್ಷ ಹೇಗೆ ಅಭಿವೃದ್ಧಿಯಾಗುತ್ತದೆ ಬೇರೆ ಹಿರಿಯ ಕಾರ್ಯಕರ್ತರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕು ಎಂದರು.

ವೇಶ್ಯಾವಾಟಿಕೆಯಲ್ಲಿ ಸಿಕ್ಕಿಕೊಂಡವನನ್ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕೂರಿಸುವುದು ಸರಿಯಲ್ಲ; ಆರ್. ರಾಜೇಂದ್ರ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ವತಿಯಿಂದ ಸತ್ಯಶೋಧನಾ ಸಮಿತಿ ಭೇಟಿ ನೀಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಚರ್ಚೆ ನಡೆಸಿತು.ವಿಧಾನ ಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಸ್ಥಾನಗಳನ್ನು ಪಡೆಯುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾದ ಕಾರಣ ರಾಜ್ಯದಲ್ಲಿ ಒಂದು ಶೋಧನಾ ಸಮಿತಿಯನ್ನು ರಚನೆ ಮಾಡಿ, ಕಾಂಗ್ರೆಸ್ ಪಕ್ಷದ ಸೋಲಿಗೆ ಹಾಗೂ ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ಮತ್ತೆ ಪಕ್ಷವನ್ನು ಸದೃಢಗೊಳಿಸಲು ಈ ಸಮಿತಿ ರಚಿಸಲಾಗಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗುವವರು ಹೋಗಲಿ, ಕಾಂಗ್ರೆಸ್ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿಲ್ಲ ಹಾಗೆಂದು ತಿಳಿದುಕೊಂಡವರು ಮೂರ್ಖರು. ಪಕ್ಷವನ್ನು ಕೆಡಿಸುವವರು ಇರುತ್ತಾರೆ ಅವರನ್ನೆಲ್ಲ ಪರಿಗಣನೆಗೆ ತೆಗೆದುಕೊಳ್ಳಬಾರದು. ಕಾಂಗ್ರೆಸ್ ಪಕ್ಷಕ್ಕೆ ಸ್ವಾತಂತ್ರ್ಯ ಪೂರ್ವದ ಇತಿಹಾಸವಿದೆ.ಬಿಜೆಪಿ ಪಕ್ಷದವರು ಅಧಿಕಾರದ ದುರಾಸೆ, ಹಣದಾಸೆಯಿಂದ ನೆಹರು ಕುಟುಂಬವನ್ನು ಬೈಯುವ ಕಾರ್ಯ ಮಾಡುತ್ತಿದ್ದಾರೆ, ದೇಶದ ಅಭಿವೃದ್ಧಿಯನ್ನು ಕಾಂಗ್ರೆಸ್ ಪಕ್ಷ ಮಾಡಿರುವುದು. ಮೋದಿ ನೀರಿನ ಅಣೆಕಟ್ಟು ಕಟ್ಟುತ್ತೇನೆ ಎಂದು ಹೇಳಿ ಐದು ವರ್ಷಗಳಾಗಿವೆ ಕಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.

ಹಾಗೆಯೇ , ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್ ಸುದರ್ಶನ್ ಮಾತನಾಡಿ ,ಗಾಂಧಿ, ನೆಹರು, ಅಂಬೇಡ್ಕರ್ ಅವರ ಪರಂಪರೆಯನ್ನು ಕಾಂಗ್ರೆಸ್ ಪಕ್ಷ ಗಟ್ಟಿಗೊಳಿಸಬೇಕು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಜನಪರ ಕಾರ್ಯ ಮಾಡುವ ಮೂಲಕ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು ಅಂತಹ ಸಂದರ್ಭಗಳಲ್ಲಿ ಅನೇಕ ಏರುಪೇರುಗಳು ಉಂಟಾಗುತ್ತವೆ ಅವುಗಳನ್ನು ಸರಿಪಡಿಸಿಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಮುದ್ದಹನುಮೇಗೌಡ ಸಂಸದರಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದವರು, ಹೈಕಮಾಂಡ್ ಗೆ ಕೊನೆಯ ಗಳಿಗೆಯವರೆಗೂ ಮನವಿ ಮಾಡಿಕೊಂಡೆವು ಆದರೆ ಮುದ್ದಹನುಮೇಗೌಡ ಅವರಿಗೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ವಿಷಾದವಿದೆ ಎಂದು ಮಾಜಿ ಸಂಸದ ,ದೃವ ನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದರು.

ABOUT THE AUTHOR

...view details