ಕರ್ನಾಟಕ

karnataka

By ETV Bharat Karnataka Team

Published : Oct 2, 2023, 2:12 PM IST

ETV Bharat / state

ಲಾರಿ, ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಮೂವರ ಸಾವು

ತುಮಕೂರಿನಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಭೀಕರ ಅಪಘಾತ
ಭೀಕರ ಅಪಘಾತ

ತುಮಕೂರು:ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು‌ ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ಅರಸಾಪುರ ಗೇಟ್ ಬಳಿ ಇಂದು ನಡೆದಿದೆ.
ಮೃತರನ್ನು ಪವನ್ (20), ಬಾಲಾಜಿ (18), ಅನಿತಾ (40) ಎಂದು ಗುರುತಿಸಲಾಗಿದೆ. ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ಹೋಗುವಾಗ ಅವಘಡ ಸಂಭವಿಸಿದೆ. ತಾಯಿ ಮಗ ಹಾಗೂ ಅಣ್ಣನ ಮಗ ದುರಂತದಲ್ಲಿ ಮೃತಪಟ್ಟಿದ್ದಾರೆ. ಮೃತರೆಲ್ಲ ಮಧುಗಿರಿ ಮೂಲದ ವೀರೇನಹಳ್ಳಿ ತಾಂಡಾದ ವಾಸಿಗಳಾಗಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೊರಟಗೆರೆ ಸಬ್ಇಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಕಾರು ಅಪಘಾತ: ಕಳೆದವಾರ ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಲಾರಿ ಹಾಗೂ ಕಾರು ನಡುವಿನ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದ. ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಘಟನೆ ಸಂಭವಿಸಿತು. ಮೃತರನ್ನು ಆಕಾಶ್ (20), ಹೇಮಂತ್ (28) ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿತ್ತು.

ಬೆಂಗಳೂರಿನಿಂದ ಪಾವಗಡ ಕಡೆಗೆ ಬರುತ್ತಿದ್ದ ವೇಳೆ ಲಾರಿ ಮುಖಾಮುಖಿ ಡಿಕ್ಕಿಹೊಡೆದಿತ್ತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು. ಕಾರಿನಲ್ಲಿದ್ದವರು ಪಾವಗಡ ಮೂಲದವರು ಎಂದು ತಿಳಿದುಬಂದಿತ್ತು. ದುರಂತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಶಿವಮೊಗ್ಗದಲ್ಲೂ ನಡೆದ ಘಟನೆ:ಲಾರಿ ಹಾಗೂ ಎರಡು ಬೈಕ್​​ಗಳ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕು ಕಲ್ಲಿಹಾಳ್ ಹಾಗೂ ಅರಹತೊಳಲು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿತ್ತು. ಮರದ ತುಂಡು ತುಂಬಿಕೊಂಡು ಹೊರಟಿದ್ದ ಲಾರಿಗೆ ಬೈಕ್​ಗಳು ಡಿಕ್ಕಿ ಹೊಡೆದಿವೆ ಎಂದು ತಿಳಿದುಬಂದಿತ್ತು.

ಒಂದೇ ಬೈಕ್​​ನಲ್ಲಿದ್ದ ಮೂವರು ಅಪ್ರಾಪ್ತರು ಶಶಾಂಕ್(17), ಯಶವಂತ್(17) ಹಾಗೂ ವಿಕಾಸ್(17) ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಇನ್ನೊಂದು ಬೈಕ್​​ನಲ್ಲಿದ್ದ ಅರದೊಟ್ಲು ಗ್ರಾಮದ ಗಗನ್ ಎಂಬ ಯುವಕ ಗಂಭೀರವಾಗಿ ಗಾಯಗೊಂದ್ದಾನೆ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತ ಬಾಲಕರು ಕಲ್ಲಿಹಾಳ್ ಎಂಬ ಗ್ರಾಮದಲ್ಲಿ ನಡೆದ ಗಣಪತಿ ನಿಮಜ್ಜನ ಮೆರವಣಿಗೆ ಮುಗಿಸಿ ವಾಪಸ್ ಆಗಿದ್ದರು ಈ ವೇಳೆ ಅಪಘಾತ ಸಂಭವಿಸಿತ್ತು.

ಇದನ್ನೂ ಓದಿ:ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಸರಣಿ ಅಪಘಾತ: ಮೂವರ ಸಾವು

ABOUT THE AUTHOR

...view details