ತುಮಕೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದರು.
ಸಿದ್ಧಗಂಗಾ ಮಠಕ್ಕೆ ಶರತ್ ಬಚ್ಚೇಗೌಡ ಭೇಟಿ: ಶ್ರೀಗಳ ಗದ್ದುಗೆ ಎದುರು ಕುಳಿತು ಪ್ರಾರ್ಥನೆ
ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ಶರತ್ ಬಚ್ಚೇಗೌಡ
ತಮ್ಮ ಬೆಂಬಲಿಗರೊಂದಿಗೆ ಮಠಕ್ಕೆ ಆಗಮಿಸಿದ್ದ ಶರತ್ ಅವರು ಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು. ಅಲ್ಲದೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ನಂತರ ಗದ್ದುಗೆ ಬಳಿ ಇರುವ ಧ್ಯಾನ ಮಂದಿರದಲ್ಲಿ ಕೆಲಕಾಲ ಕುಳಿತು ಪ್ರಾರ್ಥನೆ ಸಲ್ಲಿಸಿದರು.