ಕರ್ನಾಟಕ

karnataka

By

Published : Dec 13, 2019, 6:00 PM IST

ETV Bharat / state

ಹೇಮಾವತಿ ನೀರು ಹರಿಸುವಂತೆ ಆಗ್ರಹಿಸಿ ಸಿದ್ಧರಬೆಟ್ಟ ಸ್ವಾಮೀಜಿಯಿಂದ ಹೋರಾಟ..

ತೋವಿನಕೆರೆಯ ಸುತ್ತಮುತ್ತಲಿನ ಕೆರೆಗಳಿಗೆ ಹೇಮಾವತಿ ನೀರು ಹರಿಸುವಂತೆ ಆಗ್ರಹಿಸಿ ಸಿದ್ಧರಬೆಟ್ಟದ ಬಾಳೆಹೊನ್ನೂರು ಶಾಖಾ ಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಪ್ರತಿಭಟನೆ ನಡೆಸಿದ್ದಾರೆ.

Sri Veerabhadra Shivacharya Swamiji
ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ತುಮಕೂರು:ಕೊರಟಗೆರೆ ತಾಲೂಕಿನ ತೋವಿನಕೆರೆಯ ಸುತ್ತಮುತ್ತಲಿನ ಕೆರೆಗಳಿಗೆ ಹೇಮಾವತಿ ನೀರು ಹರಿಸುವಂತೆ ಆಗ್ರಹಿಸಿ ಸಿದ್ಧರಬೆಟ್ಟದ ಬಾಳೆಹೊನ್ನೂರು ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಹೇಮಾವತಿ ನೀರು ಹರಿಸುವಂತೆ ಆಗ್ರಹಿಸಿ ಸಿದ್ಧರಬೆಟ್ಟ ಸ್ವಾಮೀಜಿಯಿಂದ ಹೋರಾಟ..

ಕೊರಟಗೆರೆ ತಾಲೂಕು ತೋವಿನಕೆರೆಯಿಂದ ಬೈಕ್ ರ್ಯಾಲಿ ಹೊರಟ ನೂರಾರು ಪ್ರತಿಭಟನಾಕಾರರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿವರೆಗೂ ಸಾಗಿದರು.ಅನೇಕ ವರ್ಷಗಳಿಂದಲೂ ಕೊರಟಗೆರೆ ಭಾಗದಲ್ಲಿ ಸರಿಯಾಗಿ ಮಳೆಯಾಗಿಲ್ಲ. ಹಾಗಾಗಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಜಾನುವಾರುಗಳಿಗೂ ಮೇವಿನ ತೊಂದರೆ ಆಗಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಜಿಲ್ಲೆಯ ತಿಪಟೂರು, ತುರುವೇಕೆರೆ, ಗುಬ್ಬಿ, ಕುಣಿಗಲ್ ಸೇರಿ ಇತರೆ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರನ್ನ ಹರಿಸಲಾಗುತ್ತಿದೆ. ಆದರೆ, ತೋವಿನಕೆರೆ ಸುತ್ತಮುತ್ತಲಿನ ಭಾಗಕ್ಕೆ ನೀರು ಹರಿಸಿಲ್ಲ. ಹೀಗಾಗಿ ಈ ಭಾಗದ ನೀರಾವರಿ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್​ಗೆ ಒತ್ತಾಯಿಸಿದರು.

ABOUT THE AUTHOR

...view details