ಕರ್ನಾಟಕ

karnataka

ETV Bharat / state

ಆಹಾರ ಅರಸಿ ಮನೆ ಬಾಗಿಲಿಗೇ ಬಂತು ಹೆಬ್ಬಾವು...! - undefined

ಹೆಬ್ಬಾವೊಂದು ಮನೆ ಮುಂದೆ ಪ್ರತ್ಯಕ್ಷವಾಗಿ ಜನರನ್ನು ಆತಂಕಗೊಳಿಸಿರುವ ಘಟನೆ ಕುಣಿಗಲ್​ ತಾಲೂಕಿನ ಹಳೇಪೇಟೆ ಗ್ರಾಮದಲ್ಲಿ ನಡೆದಿದೆ.

ಹೆಬ್ಬಾವು

By

Published : Jun 26, 2019, 11:56 AM IST

ತುಮಕೂರು: ಆಹಾರ ಅರಸಿ ಗ್ರಾಮಕ್ಕೆ ನುಗ್ಗಿದ ಹೆಬ್ಬಾವನ್ನು ಕಂಡು ಕೆಲಕಾಲ ಗ್ರಾಮಸ್ಥರು ಬೆಚ್ಚಿಬಿದ್ದ ಘಟನೆ ಕುಣಿಗಲ್ ತಾಲೂಕಿನ ಹಳೇಪೇಟೆ ಗ್ರಾಮದಲ್ಲಿ ನಡೆದಿದೆ.

ಹಳೇಪೇಟೆ ಗ್ರಾಮದಲ್ಲಿ ಪ್ರತ್ಯಕ್ಷವಾದ ಹೆಬ್ಬಾವು

ದಿಢೀರ್ ಮನೆ ಮುಂದೆ ಪ್ರತ್ಯಕ್ಷವಾಗಿದ್ದ ಸುಮಾರು 8 ಅಡಿ ಉದ್ದದ ಹಾವನ್ನ ಕಂಡು ಜನರು ಗಾಬರಿಗೊಂಡಿದ್ದಾರೆ. ತಕ್ಷಣ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಉರಗ ರಕ್ಷಕ ಚೇತನ್ ನೀರಿನ ಟ್ಯಾಂಕ್ ಹಿಂದೆ ಅವಿತುಕೊಂಡಿದ್ದ ಹಾವನ್ನು ಸುರಕ್ಷಿತವಾಗಿ ಹಿಡಿದು ನಂತರ ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಅಲ್ಲದೆ ಅಧಿಕಾರಿಗಳು ಹೆಬ್ಬಾವನ್ನು ಹುಲಿಯೂರುದುಗ೯ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

For All Latest Updates

TAGGED:

ABOUT THE AUTHOR

...view details