ಕರ್ನಾಟಕ

karnataka

ETV Bharat / state

ಮಹಿಳೆಯ ಶವ ಹುಡುಕಲು ಹೋದ ಪೊಲೀಸರಿಗೆ ಸಿಕ್ಕಿದ್ದು ವೃದ್ಧನ ಶವ..

ಇತ್ತೀಚೆಗೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕಲಾವತಿ ಎಂಬ ಮಹಿಳೆಯ ಕೊಲೆಯಾಗಿತ್ತು. ಅಲ್ಲದೆ ಆರೋಪಿಗಳು ಶವವನ್ನು ನಾಲೆಗೆ ಎಸೆದಿರುವುದಾಗಿ ಹೇಳಿಕೆ ಕೊಟ್ಟಿದ್ದರು. ಹೀಗಾಗಿ, ನಾಲೆಯ ಬಳಿ ಪೊಲೀಸರು ಹುಡುಕಾಟ ನಡೆಸಿದ್ದರು..

By

Published : Dec 28, 2021, 3:42 PM IST

ತುಮಕೂರು ಗ್ರಾಮಾಂತರ ಪೊಲೀಸ್​ ಠಾಣೆ
ತುಮಕೂರು ಗ್ರಾಮಾಂತರ ಪೊಲೀಸ್​ ಠಾಣೆ

ತುಮಕೂರು :ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದ್ದ ಮಹಿಳೆಯ ಶವವನ್ನು ಪತ್ತೆ ಹಚ್ಚಲು ಹೇಮಾವತಿ ನಾಲೆ ಬಳಿ ತೆರಳಿದ್ದ ತುಮಕೂರು ಪೊಲೀಸರಿಗೆ, ಅಪರಿಚಿತ ವೃದ್ಧನ ಶವ ಪತ್ತೆಯಾಗಿರೋ ಘಟನೆ ನಡೆದಿದೆ.

ತಾಲೂಕಿ ದೊಡ್ಡಸಾರಂಗಿ ಸಮೀಪ ಹೇಮಾವತಿ ನಾಲೆ ಬಳಿ ಪೊಲೀಸರು ಹುಡುಕಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ಸುಮಾರು 65 ವಯಸ್ಸಿನ ವೃದ್ಧನ ಶವ ಇರುವುದು ಬೆಳಕಿಗೆ ಬಂದಿದೆ.

ಇತ್ತೀಚೆಗೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕಲಾವತಿ ಎಂಬ ಮಹಿಳೆಯ ಕೊಲೆಯಾಗಿತ್ತು. ಅಲ್ಲದೆ ಆರೋಪಿಗಳು ಶವವನ್ನು ನಾಲೆಗೆ ಎಸೆದಿರುವುದಾಗಿ ಹೇಳಿಕೆ ಕೊಟ್ಟಿದ್ದರು. ಹೀಗಾಗಿ, ನಾಲೆಯ ಬಳಿ ಪೊಲೀಸರು ಹುಡುಕಾಟ ನಡೆಸಿದ್ದರು.

ಆರೋಪಿ ಗಜೇಂದ್ರ ಎಂಬಾತ ಕಲಾವತಿಯನ್ನು ಕೊಲೆ ಮಾಡಿರುವ ಶಂಕೆಯ ಮೇಲೆ ಬಂಧಿಸಲಾಗಿತ್ತು. ಆತ ಮಹಿಳೆಯನ್ನ ಕೊಲೆ ಮಾಡಿ ನಾಲೆಗೆ ಎಸೆದಿದ್ದೇನೆ ಎಂದು ಹೇಳಿಕೆ ನೀಡಿದ್ದ. ಮತ್ತೆ ಆಕೆಯೇ ನಾಲೆಗೆ ಹಾರಿದ್ದಾಳೆ ಎಂದು ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದ.

ಹೀಗಾಗಿ, ಪೊಲೀಸರು ನಾಲೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಿದ್ದರು. ಆಗ ವೃದ್ಧನ ಶವ ಪತ್ತೆಯಾಗಿದೆ. ಈ ಪ್ರಕರಣದ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details